<p>ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲ ಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.</p>.<p>ಖಚಿತ ಮಾಹಿತಿ ಆಧರಿಸಿ ವಿಟ್ಲ ಪಿಎಸ್ಐ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಸುಮಾರು 20 ರಿಂದ 25 ಮಂದಿಯ ಗುಂಪು ಸೇರಿ ಕೋಳಿ ಅಂಕದಲ್ಲಿ ತೊಡಗಿದ್ದು, ಪೊಲೀಸರನ್ನು ಕಂಡ ಕೂಡಲೇ ಓಡಲು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಕಸಬಾ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಎಂಬುವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, ₹ 1 ಸಾವಿರ ನಗದು ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-1040325077</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲ ಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.</p>.<p>ಖಚಿತ ಮಾಹಿತಿ ಆಧರಿಸಿ ವಿಟ್ಲ ಪಿಎಸ್ಐ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಸುಮಾರು 20 ರಿಂದ 25 ಮಂದಿಯ ಗುಂಪು ಸೇರಿ ಕೋಳಿ ಅಂಕದಲ್ಲಿ ತೊಡಗಿದ್ದು, ಪೊಲೀಸರನ್ನು ಕಂಡ ಕೂಡಲೇ ಓಡಲು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಕಸಬಾ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಎಂಬುವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, ₹ 1 ಸಾವಿರ ನಗದು ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-1040325077</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>