ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಜಾಗೃತಿ (ಸ್ವೀಪ್) ಕಾರ್ಯಕ್ರಮದ ಭಾಗವಾಗಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಸಾಕ್ಷರತಾ ಕ್ಲಬ್ ರಚನೆ, ಕ್ಲಬ್ಗಳಿಗೆ ರಾಯಭಾರಿ ನೇಮಕ, ಅರಿವು ಜಾಥಾ, ಯಕ್ಷಗಾನ ವೇಷಧಾರಿಗಳ ಮೂಲಕ ಮಾಲ್, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತಿತರ ಜನದಟ್ಟಣಿ ಪ್ರದೇಶಗಳಲ್ಲಿ ಕರಪತ್ರ ಹಂಚಿಕೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಯುವ ಜನರನ್ನು ಪ್ರೇರೇಪಿಸಲಾಗಿತ್ತು. ಈ ಎಲ್ಲ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಡಾ. ಕುಮಾರ್ ಪ್ರತಿಕ್ರಿಯಿಸಿದರು.