ಮತದಾನದ ಹಕ್ಕು ಹಂತಹಂತವಾಗಿ ಭಾರತದ ಪ್ರಜಾಪ್ರಭುತ್ವದಲ್ಲಿ ಬೆಳೆದು ಬಂದಿದ್ದು ಎಲ್ಲರಿಗೂ ಈ ಹಕ್ಕು ನೀಡಿದಾಗ ಅನೇಕ ಸಂದೇಹಗಳು ಇದ್ದವು. ಆದರೂ ಅದು ಯಶಸ್ಸು ಕಂಡಿದೆ. ಈಗ ಶಾಂತಿಯುತ, ಪ್ರಜಾಪ್ರಭುತ್ವ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಯುತ್ತಿದೆ. ಬೇರೆ ದೇಶಗಳಲ್ಲಿ ಈ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆಗಳು ಇವೆ ಎಂದ ಅವರು ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಮಾತ್ರ ಕಡಿಮೆ ಮತದಾನ ಆಗುತ್ತದೆ. ರಾಜ್ಯಕ್ಕೆ ಅತಿಹೆಚ್ಚು ಆದಾಯ ನೀಡುವ ಬೆಂಗಳೂರಿಗರು ಆ ಹಣವನ್ನು ಹೇಗೆ ಬಳಸಬೇಕು ಎಂಬುದನ್ನು ನಿರ್ಧರಿಸುವ ಯೋಜನೆಗಳನ್ನು ಜಾರಿಗೆ ತರುವ ವ್ಯವಸ್ಥೆಯಲ್ಲಿ ಪಾಲುದಾರರಾಗುವುದಿಲ್ಲ ಎಂಬುದು ಬೇಸರದ ವಿಷಯ ಎಂದರು.