ಸೋಮವಾರ ಇಲ್ಲಿ ಪೌರ ಕಾರ್ಮಿಕರೊಂದಿಗೆ ಸಭೆ ನಡೆಸಿದ ಅವರು, ‘ಮುಂಗಾರು ಆರಂಭಗೊಂಡಿದೆ. ಮಂಗಳೂರು ನಗರದಲ್ಲಿಯೂ ಹೆಚ್ಚು ಮಳೆಯಾಗುತ್ತಿದೆ. ತ್ಯಾಜ್ಯ ಇದ್ದರೆ ರಸ್ತೆಗಳಲ್ಲಿ ಮತ್ತಷ್ಟು ತೊಂದರೆಯಾಗುತ್ತದೆ, ನಾಗರಿಕರ ಆರೋಗ್ಯ ಹಾಗೂ ನಗರದ ಸ್ವಚ್ಛತೆ ದೃಷ್ಟಿಯಿಂದ ಪೌರ ಕಾರ್ಮಿಕರು ಕೆಲಸ ಪ್ರಾರಂಭಿಸಬೇಕು’ ಎಂದರು.