ಕಾರ್ಯಪಡೆ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ಬಿಸಾಡುವ ರಸ್ತೆಗಳ ಇಕ್ಕೆಲ, ನೀರಿನತೋಡು, ಚರಂಡಿ ಮತ್ತು ಸಾರ್ವಜನಿಕ ಪ್ರದೇಶಗಳನ್ನು ಗುರುತಿಸಿ, ಅಲ್ಲಿರುವ ತ್ಯಾಜ್ಯಗಳನ್ನು ಸಂಪೂರ್ಣ ವಿಲೇವಾರಿ ಮಾಡಬೇಕು. ಗುಣಮಟ್ಟದ ಒಣ ತ್ಯಾಜ್ಯಗಳು ಇದ್ದಲ್ಲಿ ಅದನ್ನು ಸ್ವಚ್ಛ ಸಂಕೀರ್ಣದಲ್ಲಿ ಸಂಗ್ರಹಿಸಬಹುದು. ಸ್ಥಳೀಯ ಸಂಘ ಸಂಸ್ಥೆ, ಸ್ವ ಸಹಾಯ ಸಂಘ, ಸಂಜೀವಿನಿ ಒಕ್ಕೂಟ, ಶಾಲಾಭಿವೃದ್ಧಿ ಸಮಿತಿ, ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಈ ಕಾರ್ಯ ನಡೆಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ತಾಲ್ಲೂಕು ಪಂಚಾಯಿತಿ ಪ್ರಮುಖರಿಗೆ ತಿಳಿಸಿದ್ದಾರೆ.