ಮಂಗಳೂರು: ಉಳ್ಳಾಲ ಉಳಿಯ ಆಸುಪಾಸಿನ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಅಸಂಖ್ಯ ಮೀನುಗಳು ಸತ್ತುಬಿದ್ದಿವೆ. ಮಾಲಿನ್ಯದಿಂದಾಗಿ ಜಲಚರಗಳು ಸತ್ತಿರುವ ಸಾಧ್ಯತೆಗಳಿವೆ ಎಂದು ನದಿ ಉಳಿಸಿ ಅಭಿಯಾನದ ಸಂಚಾಲಕ ರಿಯಾಜ್ ಮಂಗಳೂರು ಆರೋಪಿಸಿದ್ದಾರೆ.
ಉಳಿಯ ಭಾಗದ ಹಿನ್ನೀರು ಮಲಿನಗೊಂಡಿದ್ದು, ನೀರಿನ ಬಣ್ಣ ಬದಲಾಗಿದೆ. ಕೈಗಾರಿಕಾ ತ್ಯಾಜ್ಯ, ಮನೆಯ ತ್ಯಾಜ್ಯಗಳು ನೇರವಾಗಿ ನದಿಗೆ ಸೇರುತ್ತಿವೆ. ಇದರಿಂದ ನೀರು ಕಲುಷಿತಗೊಂಡಿರಬಹುದು ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.