‘ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಹೊಟೇಲು, ಅಂಗಡಿಗಳು ಹಾಗೂ ಲಾಡ್ಜಿಂಗ್ ಇವೆ. ಆದರೆ ಕಟ್ಟಡದ ಮಾಲೀಕರು ಚರಂಡಿ ನಿರ್ಮಿಸಿದ್ದರೂ, ತೈಲದಂತೆ ರಾಸಾಯನಿಕ ಹರಿದು ಸ್ಥಳೀಯ ಬಾವಿಗಳನ್ನು ಸೇರುತ್ತಿದೆ. ಬಾವಿಗಳಲ್ಲಿನ ನೀರು ಕುಡಿಯಲು ಅಯೋಗ್ಯವಾಗಿದೆ. ವರ್ಷದಿಂದ ಸಮಸ್ಯೆ ಉಲ್ಬಣವಾಗಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ ಬೆಳ್ಮ ಗ್ರಾಮ ಪಂಚಾಯಿತಿಗೆ ದೂರು ನೀಡುತ್ತಾ ಬಂದಿದ್ದೇವೆ . ಆದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂಬುದು ಸ್ಥಳೀಯರ ಆರೋಪ.