ಪ್ರತಿಭಟನೆಯ ಎಚ್ಚರಿಕೆ: ನೀರಿನ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಗ್ರಾಮ ಪಂಚಾಯಿತಿ ಸ್ಪಂದಿಸಿಲ್ಲ. ನೀರಿನ ಸಮಸ್ಯೆಯನ್ನು ನಿವಾರಿಸದೆ ಇದ್ದರೆ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಂಡೂರು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಆಲಿ ನೇರೋಳ್ತಡ್ಕ ಎಚ್ಚರಿಕೆ ನೀಡಿದ್ದಾರೆ.