ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಲ್ಲಿ ಬುಧವಾರ ಮಾತನಾಡಿದ ಅವರು, ‘ಇದೇ 8ರಂದು ಬೆಳಿಗ್ಗೆ 6.30ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಜಾಥಾವು ಲೇಡಿಹಿಲ್, ಲಾಲ್ಬಾಗ್, ಪಿವಿಎಸ್, ಬಂಟ್ಸ್ ಹಾಸ್ಟೆಲ್ ವೃತ್ತ, ಅಂಬೇಡ್ಕರ್ ವೃತ್ತ, ಹಂಪನಕಟ್ಟೆ, ಗಡಿಯಾರ ಗೋಪುರ, ಮಹಾತ್ಮಗಾಂಧಿ ರಸ್ತೆ ಮೂಲಕ ಸಾಗಿ ಉರ್ವ ಮೈದಾನದಲ್ಲಿ ಸಂಪನ್ನವಾಗಲಿದೆ. ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಅವರು ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. 8 ವರ್ಷ ಮೇಲ್ಪಟ್ಟ ಮಕ್ಕಳು ಹಾಗೂ ಪೋಷಕರು ಹಾಗೂ ಆಸಕ್ತರು ಜಾಥಾದಲ್ಲಿ ಭಾಗವಹಿಸಬಹುದು’ ಎಂದರು.