<p><strong>ಮೂಡುಬಿದಿರೆ</strong>: ವಿದ್ಯಾಗಿರಿಯ ಹೊಟೇಲೊಂದರ ತ್ಯಾಜ್ಯ ಹರಿದು ಹತ್ತಿರದ ಬಾವಿಯ ನೀರು ಕಲುಷಿತಗೊಂಡಿದೆ ಎಂದು ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ. ಪರಿಹಾರಕ್ಕೆ ಹೋಟೆಲ್ನವರು ಕಾಲಾವಕಾಶ ಕೋರಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಎಂ ತಿಳಿಸಿದ್ದಾರೆ.</p><p>ಗಾಂಧಿನಗರದ ಅನ್ನು ಎಂಬವರ ಮನೆಯ ಬಾವಿ ನೀರು ಹಾಳಾಗಿದೆ. ನಾಲ್ಕು ವರ್ಷಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ತ್ಯಾಜ್ಯದಿಂದಾಗಿ ನೀರಿನ ಬಣ್ಣ ಬದಲಾಗಿದ್ದು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ಈ ಬಾವಿಯ ನೀರನ್ನು ಐದು ಕುಟುಂಬಗಳು ಬಳಸುತ್ತಿದ್ದರು. ಈಗ ಕುಡಿಯುವುದಕ್ಕೆ ಮಾತ್ರವಲ್ಲ, ಪಾತ್ರೆ ತೊಳೆಯುವುದಕ್ಕೂ ಬಳಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ.</p><p>ಪುರಸಭೆಯ ನೀರು ಎರಡು ದಿನಗಳಿಗೊಮ್ಮೆ ಮಾತ್ರ ಬರುತ್ತದೆ. ಆದ್ದರಿಂದ ಪ್ರತಿದಿನ ಹಣ ಕೊಟ್ಟು ಟ್ಯಾಂಕರ್ ನೀರು ತರಿಸುತ್ತಿದ್ದೇವೆ. ಮನೆಯಲ್ಲಿ ಅಂಗವಿಕಲ ಹುಡುಗನಿದ್ದು ಆತನ ಅಗತ್ಯಗಳಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ದೈವಸ್ಥಾನಕ್ಕೂ ನಿತ್ಯ ನೀರಿನ ಅವಶ್ಯಕತೆ ಇದೆ ಎಂದು ಮೋಹನ್ ತಿಳಿಸಿದ್ದಾರೆ.</p><p>ಕಲುಷಿತಗೊಂಡ ಬಾವಿಯ ನೀರನ್ನು ಶುದ್ಧೀಕರಿಸಬೇಕು ಹಾಗೂ ಹೋಟೆಲ್ನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.</p><p>ಸಮಸ್ಯೆ ಇದೆ ಎಂದು ಸ್ಥಳೀಯರಾದ ನಾರಾಯಣ ಮತ್ತು ಅನ್ನು ಅವರು ದೂರು ನೀಡಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೋಟೆಲ್ ತ್ಯಾಜ್ಯ ನೀರಿನ ಒರತೆಯ ಜೊತೆ ಸೇರಿರುವುದರಿಂದ ಬಾವಿ ಕಲುಷಿತಗೊಂಡಿರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಕ್ರಮ ವಹಿಸುವಂತೆ ನೋಟೀಸ್ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ವಿದ್ಯಾಗಿರಿಯ ಹೊಟೇಲೊಂದರ ತ್ಯಾಜ್ಯ ಹರಿದು ಹತ್ತಿರದ ಬಾವಿಯ ನೀರು ಕಲುಷಿತಗೊಂಡಿದೆ ಎಂದು ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ. ಪರಿಹಾರಕ್ಕೆ ಹೋಟೆಲ್ನವರು ಕಾಲಾವಕಾಶ ಕೋರಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಎಂ ತಿಳಿಸಿದ್ದಾರೆ.</p><p>ಗಾಂಧಿನಗರದ ಅನ್ನು ಎಂಬವರ ಮನೆಯ ಬಾವಿ ನೀರು ಹಾಳಾಗಿದೆ. ನಾಲ್ಕು ವರ್ಷಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ತ್ಯಾಜ್ಯದಿಂದಾಗಿ ನೀರಿನ ಬಣ್ಣ ಬದಲಾಗಿದ್ದು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ಈ ಬಾವಿಯ ನೀರನ್ನು ಐದು ಕುಟುಂಬಗಳು ಬಳಸುತ್ತಿದ್ದರು. ಈಗ ಕುಡಿಯುವುದಕ್ಕೆ ಮಾತ್ರವಲ್ಲ, ಪಾತ್ರೆ ತೊಳೆಯುವುದಕ್ಕೂ ಬಳಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ.</p><p>ಪುರಸಭೆಯ ನೀರು ಎರಡು ದಿನಗಳಿಗೊಮ್ಮೆ ಮಾತ್ರ ಬರುತ್ತದೆ. ಆದ್ದರಿಂದ ಪ್ರತಿದಿನ ಹಣ ಕೊಟ್ಟು ಟ್ಯಾಂಕರ್ ನೀರು ತರಿಸುತ್ತಿದ್ದೇವೆ. ಮನೆಯಲ್ಲಿ ಅಂಗವಿಕಲ ಹುಡುಗನಿದ್ದು ಆತನ ಅಗತ್ಯಗಳಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ದೈವಸ್ಥಾನಕ್ಕೂ ನಿತ್ಯ ನೀರಿನ ಅವಶ್ಯಕತೆ ಇದೆ ಎಂದು ಮೋಹನ್ ತಿಳಿಸಿದ್ದಾರೆ.</p><p>ಕಲುಷಿತಗೊಂಡ ಬಾವಿಯ ನೀರನ್ನು ಶುದ್ಧೀಕರಿಸಬೇಕು ಹಾಗೂ ಹೋಟೆಲ್ನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.</p><p>ಸಮಸ್ಯೆ ಇದೆ ಎಂದು ಸ್ಥಳೀಯರಾದ ನಾರಾಯಣ ಮತ್ತು ಅನ್ನು ಅವರು ದೂರು ನೀಡಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೋಟೆಲ್ ತ್ಯಾಜ್ಯ ನೀರಿನ ಒರತೆಯ ಜೊತೆ ಸೇರಿರುವುದರಿಂದ ಬಾವಿ ಕಲುಷಿತಗೊಂಡಿರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಕ್ರಮ ವಹಿಸುವಂತೆ ನೋಟೀಸ್ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>