<p><strong>ಮಂಗಳೂರು: </strong>ಇಲ್ಲಿನ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಅಲ್ಲಿಯೂ ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದರು.</p>.<p>ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತರನ್ನೂ ವೆನ್ಲಾಕ್ಗೆ ದಾಖಲು ಮಾಡಲಾಗುವುದು ಎಂದರು.</p>.<p>ಈಗಾಗಲೇ ವೆನ್ಲಾಕ್ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆಪ್ರತಿ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಇಲ್ಲಿನ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಅಲ್ಲಿಯೂ ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದರು.</p>.<p>ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತರನ್ನೂ ವೆನ್ಲಾಕ್ಗೆ ದಾಖಲು ಮಾಡಲಾಗುವುದು ಎಂದರು.</p>.<p>ಈಗಾಗಲೇ ವೆನ್ಲಾಕ್ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆಪ್ರತಿ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>