ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಬೇಕು. ಆಸ್ಪತ್ರೆಯ ತ್ಯಾಜ್ಯ ಘಟಕದ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಿರ್ವಹಣೆಗೆ ಟೆಂಡರ್ ಕರೆಯಬೇಕು. ಆಸ್ವತ್ರೆಗೆ ಬರುವ ಎಲ್ಲ ರೋಗಿಗಳ ವೈಯಕ್ತಿಕ ದಾಖಲೆಗಳು, ರೋಗಿಯ ಕಾಯಿಲೆ ವಿವರ ಒಳಗೊಂಡ ಮಾಹಿತಿ ಹಾಗೂ ಚಿಕಿತ್ಸೆಯ ವಿವರಗಳ ಬಗ್ಗೆ ದಾಖಲೆಯನ್ನು ತಯಾರು ಮಾಡಬೇಕು ಎಂದು ಸೂಚಿಸಿದರು.