ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ : ಗಡಾಯಿಕಲ್ಲಿನ ಮೇಲ್ಭಾಗದಲ್ಲಿ ಬೆಂಕಿ

Last Updated 25 ಫೆಬ್ರುವರಿ 2020, 11:03 IST
ಅಕ್ಷರ ಗಾತ್ರ

ಬೆಳ್ತಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲಿನಲ್ಲಿ ಮೇಲ್ಭಾಗದಲ್ಲಿ ಸೋಮವಾರ ಸಂಜೆಯ ವೇಳೆಗೆ ದಟ್ಟವಾದ ಬೆಂಕಿ ಕಾಣಿಸಿಕೊಂಡಿದೆ.

ತಾಲ್ಲೂಕಿನ ನಡ ಗ್ರಾಮದಲ್ಲಿರುವ ಈ ಗಡಾಯಿಕಲ್ಲು ಚಾರಣಪ್ರಿಯರ ಸ್ವರ್ಗವೆನಿಸಿಕೊಂಡಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನದಡಿಯಲ್ಲಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದೆ. ಇಲ್ಲಿಗೆ ಅನುಮತಿಯಿಲ್ಲದೆ ಚಾರಣಕ್ಕೆ ಯಾರೂ ತೆರಳುವಂತಿಲ್ಲ. ಅದರೆ ಸೋಮವಾರ ಕಾಣಿಸಿಕೊಂಡ ಬೆಂಕಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಈ ಹಿಂದೆ ಜುಲಾಯಿ ತಿಂಗಳಲ್ಲಿ ಗಡಾಯಿಕಲ್ಲಿನ ಪೂರ್ವಭಾಗ ಸ್ವಲ್ಪ ಜರಿದು ಕೆಳಗೆ ಜಾರಿತ್ತು. ಇದೀಗ ಈ ಕಲ್ಲಿನ ಬೆಟ್ಟದ ಮೇಲ್ಭಾಗದಲ್ಲಿರುವ ಗಿಡ ಮರಗಳ ಸಹಿತ ಕೆಲವೊಂದು ಪ್ರಾಣಿ ಸಂತತಿಗಳೂ ಸಹ ಬೆಂಕಿಗೆ ಆಹುತಿಯಾಗುವ ಸಾಧ್ಯತೆಗಳಿವೆ ಎಂದು ಸ್ಥಲೀಯರು ಕಳವಳ ವ್ಯಕ್ತಪಡಿಸಿದ್ದಾರೆ.

ಗಡಾಯಿಕಲ್ಲು, ನರಸಿಂಹಗಡ ಅಥವಾ ಜಮಾಲಾಬಾದ್ ಕೋಟೆ ಮುಂತಾದ ಹೆಸರಿನಿಂದ ಕರೆಸಿಕೊಳ್ಳುವ ಇದು ಏಕಶಿಲೆಯಿಂದ ಕೂಡಿದೆ. ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ ಈ ಪ್ರದೇಶದಲ್ಲಿ ಬೆಂಕಿ ಆವರಿಸಿದ್ದರಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT