‘ಶಿಕ್ಷಕನಾಗಿ ಸಾವಿರಾರು ವಿದ್ಯಾರ್ಥಿಗಳನ್ನು ದೇಶದ ಪ್ರಜ್ಞಾವಂತ ಪ್ರಜೆಗಳನ್ನಾಗಿ ರೂಪಿಸಲು ಪ್ರಯತ್ನಿಸಿದ್ದೇನೆ. ಜಾತಿ ಮತ, ಧರ್ಮ, ಪಕ್ಷವನ್ನು ಮೀರಿ, ಮಾನವೀಯತೆ, ಸಮಾನತೆ, ಸಹೋದರತೆ, ಜಾತ್ಯತೀತ ಮನೋಭಾವ ಹೊಂದಿರುವ ಮನುಜ ಜಾತಿ ಒಂದೇ ಎಂದು ನಂಬಿದ್ದೇನೆ. ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ಸ್ಕೌಟ್ ಆಯುಕ್ತನಾಗಿದ್ದೇನೆ’ ಎಂದು ಅವರು ತಿಳಿಸಿದರು.