<p><strong>ಮಂಗಳೂರು</strong>: ‘ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ’ ಎಂದು ಇಲ್ಲಿಯ ಕಂಕನಾಡಿ ಮಸೀದಿಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿ ಅಬ್ದುಲ್ ಸಮದ್ ಹೇಳಿದ್ದಾರೆ.</p>.<p>ಕಂಕನಾಡಿ ಮಸೀದಿ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕೆಲವರು ನಮಾಜ್ ಮಾಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅಬ್ದುಲ್ ಸಮದ್, ‘ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಸಮೀಪದ ಆಸ್ಪತ್ರೆಗೆ ಬಂದವರು ಅಥವಾ ಬೇರೆ ಕಡೆಯ ಕೂಲಿ ಕಾರ್ಮಿಕರು ಇರಬಹುದು. ನಾವೂ ಆಗ ನಮಾಜ್ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ’.</p>.<p>‘ಶುಕ್ರವಾರ ಸಂಜೆ ಈ ವಿಚಾರ ನಮ್ಮ ಗಮನಕ್ಕೆ ಬಂತು. ಶನಿವಾರವೇ ಮಸೀದಿಯ ಆಡಳಿತ ಸಮಿತಿ ಈ ವಿಚಾರವನ್ನು ಚರ್ಚಿಸಿ ಕ್ರಮ ವಹಿಸಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಮುನ್ನವೇ ಕದ್ರಿ ಪೊಲೀಸ್ ಠಾಣೆಯಲ್ಲಿ ನಾವು ಸ್ಪಷ್ಟನೆ ನೀಡಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ನೊಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂಬ ಭರವಸೆಯನ್ನೂ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p>‘ಇದರಲ್ಲಿ ವಿವಾದ ಏನೂ ಇಲ್ಲ. ನಮಾಜ್ ವಿಚಾರದಲ್ಲಿ ವಿವಾದ ಮಾಡುವ ಅಗತ್ಯವೂ ನಮಗಿಲ್ಲ. ನಮಾಜ್ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ’ ಎಂದು ಇಲ್ಲಿಯ ಕಂಕನಾಡಿ ಮಸೀದಿಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿ ಅಬ್ದುಲ್ ಸಮದ್ ಹೇಳಿದ್ದಾರೆ.</p>.<p>ಕಂಕನಾಡಿ ಮಸೀದಿ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕೆಲವರು ನಮಾಜ್ ಮಾಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅಬ್ದುಲ್ ಸಮದ್, ‘ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಸಮೀಪದ ಆಸ್ಪತ್ರೆಗೆ ಬಂದವರು ಅಥವಾ ಬೇರೆ ಕಡೆಯ ಕೂಲಿ ಕಾರ್ಮಿಕರು ಇರಬಹುದು. ನಾವೂ ಆಗ ನಮಾಜ್ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ’.</p>.<p>‘ಶುಕ್ರವಾರ ಸಂಜೆ ಈ ವಿಚಾರ ನಮ್ಮ ಗಮನಕ್ಕೆ ಬಂತು. ಶನಿವಾರವೇ ಮಸೀದಿಯ ಆಡಳಿತ ಸಮಿತಿ ಈ ವಿಚಾರವನ್ನು ಚರ್ಚಿಸಿ ಕ್ರಮ ವಹಿಸಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಮುನ್ನವೇ ಕದ್ರಿ ಪೊಲೀಸ್ ಠಾಣೆಯಲ್ಲಿ ನಾವು ಸ್ಪಷ್ಟನೆ ನೀಡಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ನೊಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂಬ ಭರವಸೆಯನ್ನೂ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p>‘ಇದರಲ್ಲಿ ವಿವಾದ ಏನೂ ಇಲ್ಲ. ನಮಾಜ್ ವಿಚಾರದಲ್ಲಿ ವಿವಾದ ಮಾಡುವ ಅಗತ್ಯವೂ ನಮಗಿಲ್ಲ. ನಮಾಜ್ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>