<p><strong>ಮೂಡುಬಿದಿರೆ:</strong> ಇರುವೈಲ್ನ ಬಂಗಾರ್ ಗುಡ್ಡೆಯಲ್ಲಿ ಬುಧವಾರ ಬೆಳಿಗ್ಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಲಿಲ್ಲಿ ಡಿಸೋಜ (55) ಸಾವಿಗೀಡಾಗಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೆಸ್ಕಾಂ ವಿರುದ್ಧ ಘೋಷಭೆ ಕೂಗಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.</p>.<p>ಲಿಲ್ಲಿ ಡಿಸೋಜ ಮನೆ ಹತ್ತಿರದ ವಿದ್ಯುತ್ ಕಂಬದ ತಂತಿ ಮಂಗಳವಾರ ರಾತ್ರಿ ತುಂಡಾಗಿ ಮನೆಯ ಕೊಟ್ಟಿಗೆಯ ಒಳಗೆ ಬಿದ್ದಿತ್ತು. ಬೆಳಿಗ್ಗೆ ಕೊಟ್ಟಿಗೆಗೆ ಬಂದ ಲಿಲ್ಲಿ ಅವರು ಅದನ್ನು ತುಳಿದರೆನ್ನಲಾಗಿದೆ.</p>.<p>ಮಂಗಳವಾರ ರಾತ್ರಿ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮೆಸ್ಕಾಂಗೆ ತಿಳಿಸಿದರೂ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ದೂರಿದರು. ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಮೆಸ್ಕಾಂ ಸಹಾಯಕ ಎಂಜಿನಿಯರ್ ಮೋಹನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಇರುವೈಲ್ನ ಬಂಗಾರ್ ಗುಡ್ಡೆಯಲ್ಲಿ ಬುಧವಾರ ಬೆಳಿಗ್ಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಲಿಲ್ಲಿ ಡಿಸೋಜ (55) ಸಾವಿಗೀಡಾಗಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೆಸ್ಕಾಂ ವಿರುದ್ಧ ಘೋಷಭೆ ಕೂಗಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.</p>.<p>ಲಿಲ್ಲಿ ಡಿಸೋಜ ಮನೆ ಹತ್ತಿರದ ವಿದ್ಯುತ್ ಕಂಬದ ತಂತಿ ಮಂಗಳವಾರ ರಾತ್ರಿ ತುಂಡಾಗಿ ಮನೆಯ ಕೊಟ್ಟಿಗೆಯ ಒಳಗೆ ಬಿದ್ದಿತ್ತು. ಬೆಳಿಗ್ಗೆ ಕೊಟ್ಟಿಗೆಗೆ ಬಂದ ಲಿಲ್ಲಿ ಅವರು ಅದನ್ನು ತುಳಿದರೆನ್ನಲಾಗಿದೆ.</p>.<p>ಮಂಗಳವಾರ ರಾತ್ರಿ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮೆಸ್ಕಾಂಗೆ ತಿಳಿಸಿದರೂ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ದೂರಿದರು. ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಮೆಸ್ಕಾಂ ಸಹಾಯಕ ಎಂಜಿನಿಯರ್ ಮೋಹನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>