<p>ನೆಲ್ಯಾಡಿ(ಉಪ್ಪಿನಂಗಡಿ): ಶಿರಾಡಿ ಗ್ರಾಮದ ಉದನೆ ಸಮೀಪ ರೆಖ್ಯ ನೇಲ್ಯಡ್ಕ ಎಂಬಲ್ಲಿ ಶನಿವಾರ ಮಹಿಳೆಯೊಬ್ಬರು ಗುಂಡ್ಯ ಹೊಳೆಗೆ ಬಿದ್ದು ಕಣ್ಮರೆಯಾಗಿದ್ದು, ಎನ್ಡಿಆರ್ಎಫ್ ತಂಡದ ಸದಸ್ಯರು ಹುಡುಕಾಟ ನಡೆಸಿದರು.</p>.<p>ಬೆಳ್ತಂಗಡಿ ತಾಲ್ಲೂಕು ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಸುಂದರ ಗೌಡ ಎಂಬುವರ ಪತ್ನಿ ಶಕುಂತಲಾ(50) ನೀರಿನಲ್ಲಿ ಬಿದ್ದು ಕಣ್ಮರೆಯಾದವರು. ನಾಟಿ ಔಷಧಕ್ಕಾಗಿ ನೆಲನೆಲ್ಲಿ ತರಲು ಬೆಳಿಗ್ಗೆ 6 ಗಂಟೆ ವೇಳೆಗೆ ಹೊಳೆ ಬದಿಯ ತೋಟಕ್ಕೆ ಹೋದವರು ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದಾಗ, ಹೊಳೆ ಬದಿಯಲ್ಲಿ ಚಪ್ಪಲಿ ಕಂಡಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹು<br />ದೆಂದು ಶಂಕಿಸಲಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಹಾಗೂ ಸೆಳವು ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ.</p>.<p>ಕಡಬ, ಧರ್ಮಸ್ಥಳ ಠಾಣೆಯ ಸಿಬ್ಬಂದಿ, ಅರಸಿನಮಕ್ಕಿ, ನೂಜಿಬಾಳ್ತಿಲ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೆಲ್ಯಾಡಿ(ಉಪ್ಪಿನಂಗಡಿ): ಶಿರಾಡಿ ಗ್ರಾಮದ ಉದನೆ ಸಮೀಪ ರೆಖ್ಯ ನೇಲ್ಯಡ್ಕ ಎಂಬಲ್ಲಿ ಶನಿವಾರ ಮಹಿಳೆಯೊಬ್ಬರು ಗುಂಡ್ಯ ಹೊಳೆಗೆ ಬಿದ್ದು ಕಣ್ಮರೆಯಾಗಿದ್ದು, ಎನ್ಡಿಆರ್ಎಫ್ ತಂಡದ ಸದಸ್ಯರು ಹುಡುಕಾಟ ನಡೆಸಿದರು.</p>.<p>ಬೆಳ್ತಂಗಡಿ ತಾಲ್ಲೂಕು ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಸುಂದರ ಗೌಡ ಎಂಬುವರ ಪತ್ನಿ ಶಕುಂತಲಾ(50) ನೀರಿನಲ್ಲಿ ಬಿದ್ದು ಕಣ್ಮರೆಯಾದವರು. ನಾಟಿ ಔಷಧಕ್ಕಾಗಿ ನೆಲನೆಲ್ಲಿ ತರಲು ಬೆಳಿಗ್ಗೆ 6 ಗಂಟೆ ವೇಳೆಗೆ ಹೊಳೆ ಬದಿಯ ತೋಟಕ್ಕೆ ಹೋದವರು ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದಾಗ, ಹೊಳೆ ಬದಿಯಲ್ಲಿ ಚಪ್ಪಲಿ ಕಂಡಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹು<br />ದೆಂದು ಶಂಕಿಸಲಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಹಾಗೂ ಸೆಳವು ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ.</p>.<p>ಕಡಬ, ಧರ್ಮಸ್ಥಳ ಠಾಣೆಯ ಸಿಬ್ಬಂದಿ, ಅರಸಿನಮಕ್ಕಿ, ನೂಜಿಬಾಳ್ತಿಲ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>