ರಘುವೀರ ಪ್ರಭು ಪಡೆದ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕಿನವರು ಕೋರ್ಟ್ ಆದೇಶದೊಂದಿಗೆ ಮನೆಗೆ ಬಂದಿದ್ದರು. ಈ ವೇಳೆ ಪ್ರಾರ್ಥನಾ ಪ್ರಭು, ಕೊಠಡಿಗೆ ಹೋಗಿ ಲಾಕ್ ಮಾಡಿ, ‘ಕೆನರಾ ಬ್ಯಾಂಕಿನವರ ಉಪದ್ರ, ಮೆಂಟಲ್ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮರಣಪತ್ರ ಬರೆದಿಟ್ಟು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು.