‘ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವುದರ ಜೊತೆಗೆ, ದೌರ್ಜನ್ಯ ಸಂತ್ರಸ್ತರಿಗೆ ಸಾಂತ್ವನ ನೀಡಬೇಕಿದೆ. ಅಂತಹವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲು ಎಲ್ಲಾ ಜಿಲ್ಲೆಗಳಲ್ಲೂ ಸಹಾಯವಾಣಿ ಆರಂಭಿಸಲು ಕ್ರಮ ವಹಿಸಲಿದ್ದೇವೆ. ಮಹಿಳೆಯ ಹಕ್ಕುಗಳ ಹಾಗೂ ಸೌಲಭ್ಯಗಳ ಬಗ್ಗೆ ಬಹುತೇಕ ಮಹಿಳೆಯರಿಗೆ ತಿಳಿದಿಲ್ಲ. ಈ ಕುರಿತು ಜಾಗೃತಿ ಮೂಡಿಸುವುದಕ್ಕೆ ಆದ್ಯತೆ ನೀಡಲಿದ್ದೇನೆ’ ಎಂದರು.