ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ‘ನೊಂದವರ ಜೊತೆ ಎಂದಿಗೂ ನಾವಿದ್ದೇವೆ. ದುರ್ಬಲರ ಕಣ್ಣೀರು ಒರೆಸುವುದು ನನ್ನೊಬ್ಬನಿಂದ ಸಾಧ್ಯವಿಲ್ಲ. ಅದಕ್ಕೆ ದಾನಿಗಳ ನೆರವು ಬೇಕು. ಹೀಗಾಗಿ ಸಹಾಯಹಸ್ತ ಚಾಚುವ ದಾನಿಗಳು ನಿಜವಾದ ದೇವರು. ಜಾಗತಿಕ ಬಂಟರ ಸಂಘ ಇರುವವರೆಗೆ ದೀನರ ಸೇವೆ ನಡೆಯುತ್ತಿರುತ್ತದೆ. ಎಲ್ಲರನ್ನೂ ಪ್ರೀತಿಸುವ ನಮ್ಮ ಸಮಾಜ ಜನರನ್ನು ಜಾತಿಯ ಆಧಾರದಲ್ಲಿ ವಿಂಗಡಿಸದೇ ಸೇವೆ ನೀಡುತ್ತದೆ’ ಎಂದರು.