‘ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ಇದೇ 30ರಂದು ಸಂಜೆ 4ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್.ಪ್ರಕಾಶ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಭಾಗವಹಿಸುವರು’ ಎಂದರು.
‘ಪ್ರಸಂಗಕರ್ತ ಗಣೇಶ ಕೊಳೆಕಾಡಿ, ಹಾಸ್ಯ ಕಲಾವಿದ ಮಹಾಬಲೇಶ್ವರ ಭಟ್ ಭಾಗಮಂಡಲ, ರಂಗ ಸಹಾಯಕರಾದ ನಾರಾಯಣ ಪುರುಷ ಸಜಂಕಿಲ ಇವರಿಗೆ ಯಕ್ಷನಿಧಿ ಸಮರ್ಪಿಸಲಿದ್ದೇವೆ. ಪುಂಡರೀಕಾಕ್ಷ ಉಪಾಧ್ಯಾಯ ಅವರಿಗೆ `ಸಂಗಮ ಪುರಸ್ಕಾರ', ಭಾಗವತರಾದ ಸತೀಶ್ ಶೆಟ್ಟಿ ಬೋಂದೆಲ್, ಯಕ್ಷಗಾನ ಕಲಾವಿದ ಸಂಜಯ್ ಕುಮಾರ್ ಗೋಣಿಬೀಡು, ಯಕ್ಷಗಾನ ಗುರು ರಾಮ ಸಾಲಿಯಾನ್ ಮಂಗಲ್ಪಾಡಿ, ಕಲಾಪೋಷಕ ಕೃತಿ ಕರ್ಕೇರ ಇವರಿಗೆ ‘ಯಕ್ಷ ಗೌರವ' ಸಲ್ಲಿಸಲಿದ್ದೇವೆ. ಒಟ್ಟು 25 ಯಕ್ಷ ಸಾಧಕರನ್ನು ಗೌರವಿಸಲಾಗುವುದು. ಜುಲೈ 31 ರಂದು ಸಂಜೆ 5ಕ್ಕೆ ಸಮಾರೋಪ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸುವರು’ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಅಧ್ಯಕ್ಷ ಜೀವನ್ ಅಮೀನ್, ಉಪಾಧ್ಯಕ್ಷರಾದ ಶ್ರೀಕಾಂತ್, ಜೀತು ಕುಲಾಲ್ ಸೂರಿಂಜೆ ಉಪಸ್ಥಿತರಿದ್ದರು.