<p><strong>ಮಂಗಳೂರು:</strong> ಯಕ್ಷಾಭಿನಯ ಬಳಗದ ವಾರ್ಷಿಕೋತ್ಸವವನ್ನು ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇದೇ 10ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನಮ್ಮ ಬಳಗವು ಯಕ್ಷಗುರುಗಳಾದ ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿಯವರ ಮಾರ್ಗದರ್ಶನದಲ್ಲಿ 2019ರಿಂದ ಇಲ್ಲಿ ಬಡಗು ತಿಟ್ಟು ಯಕ್ಷಗಾನವನ್ನು ಆಸಕ್ತರಿಗೆ ಕಲಿಸುತ್ತಿದೆ. ಹವ್ಯಾಸಿ ಕಲಾವಿದರು ಸೇರಿ ಪ್ರತಿವರ್ಷವೂ ಯಕ್ಷಗಾನವನ್ನು ಪ್ರದರ್ಶಿಸುತ್ತಿದ್ದೇವೆ’ ಎಂದರು.</p>.<p>‘ಈ ಸಲ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರದರ್ಶಿಸಲಿದ್ದೇವೆ. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಮದ್ದಳೆಯಲ್ಲಿ ಭರತ್ ಚಂದನ್ ಕೋಟೇಶ್ವರ, ಚಂಡೆಯಲ್ಲಿ ಶ್ರೀಕಾಂತ ಶೆಟ್ಟಿ ಯಡಮೊಗೆ ಸಹಕರಿಸಲಿದ್ದಾರೆ. ಸಾಂಪ್ರದಾಯಿಕ ಪೂರ್ವರಂಗದ ಬಾಲಗೋಪಾಲ, ಗಣಪತಿ ಕೌತುಕ ಪೀಠಿಕೆ ಸ್ತ್ರೀವೇಷ ಈ ಸಲದ ವಿಶೇಷ’ ಎಂದರು. </p>.<p>‘ಐರೋಡಿ ಮಂಜುನಾಥ್ ಕುಲಾಲ್ ಅವರಿಗೆ ಗುರುವಂದನೆ ಸಲ್ಲಿಸಲಿದ್ದೇವೆ. ಕಾರ್ಯಕ್ರಮದಲ್ಲಿ ವಿದ್ವಾಂಸ ಪ್ರಭಾಕರ ಜೋಷಿ, ವೈದ್ಯ ಡಾ.ಅಣ್ಣಯ್ಯ ಕುಲಾಲ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕಾಪಿಕಾಡು ಶಾಲೆಯ ಮುಖ್ಯೋಪಾಧ್ಯಾಯಿನಿ ಶೀಲಾವತಿ ಭಾಗವಹಿಸಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಎಚ್.ಕೆ, ಸದಸ್ಯರಾದ ಐಶ್ವರ್ಯಾ, ಲಿಖಿತಾ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಯಕ್ಷಾಭಿನಯ ಬಳಗದ ವಾರ್ಷಿಕೋತ್ಸವವನ್ನು ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇದೇ 10ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ನಮ್ಮ ಬಳಗವು ಯಕ್ಷಗುರುಗಳಾದ ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿಯವರ ಮಾರ್ಗದರ್ಶನದಲ್ಲಿ 2019ರಿಂದ ಇಲ್ಲಿ ಬಡಗು ತಿಟ್ಟು ಯಕ್ಷಗಾನವನ್ನು ಆಸಕ್ತರಿಗೆ ಕಲಿಸುತ್ತಿದೆ. ಹವ್ಯಾಸಿ ಕಲಾವಿದರು ಸೇರಿ ಪ್ರತಿವರ್ಷವೂ ಯಕ್ಷಗಾನವನ್ನು ಪ್ರದರ್ಶಿಸುತ್ತಿದ್ದೇವೆ’ ಎಂದರು.</p>.<p>‘ಈ ಸಲ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರದರ್ಶಿಸಲಿದ್ದೇವೆ. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಮದ್ದಳೆಯಲ್ಲಿ ಭರತ್ ಚಂದನ್ ಕೋಟೇಶ್ವರ, ಚಂಡೆಯಲ್ಲಿ ಶ್ರೀಕಾಂತ ಶೆಟ್ಟಿ ಯಡಮೊಗೆ ಸಹಕರಿಸಲಿದ್ದಾರೆ. ಸಾಂಪ್ರದಾಯಿಕ ಪೂರ್ವರಂಗದ ಬಾಲಗೋಪಾಲ, ಗಣಪತಿ ಕೌತುಕ ಪೀಠಿಕೆ ಸ್ತ್ರೀವೇಷ ಈ ಸಲದ ವಿಶೇಷ’ ಎಂದರು. </p>.<p>‘ಐರೋಡಿ ಮಂಜುನಾಥ್ ಕುಲಾಲ್ ಅವರಿಗೆ ಗುರುವಂದನೆ ಸಲ್ಲಿಸಲಿದ್ದೇವೆ. ಕಾರ್ಯಕ್ರಮದಲ್ಲಿ ವಿದ್ವಾಂಸ ಪ್ರಭಾಕರ ಜೋಷಿ, ವೈದ್ಯ ಡಾ.ಅಣ್ಣಯ್ಯ ಕುಲಾಲ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕಾಪಿಕಾಡು ಶಾಲೆಯ ಮುಖ್ಯೋಪಾಧ್ಯಾಯಿನಿ ಶೀಲಾವತಿ ಭಾಗವಹಿಸಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಎಚ್.ಕೆ, ಸದಸ್ಯರಾದ ಐಶ್ವರ್ಯಾ, ಲಿಖಿತಾ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>