ರಾಮಾಯಣದ ಕಥಾಭಾಗ ‘ಮಾ ನಿಷಾದ’ ಅಲ್ಲದೆ, ವಧು ವೈಶಾಲಿನಿ, ನಳಿನಾಕ್ಷ ನಂದಿನಿ, ಉಭಯಕುಲ ಬಿಲ್ಲೋಜ, ಕ್ಷಾತ್ರ ಮೇಧ, ಮಾತಂಗ ಕನ್ಯೆ, ಗಾಂಗೇಯ, ಕಲಿ ಕೀಚಕ, ರಾಜಾ ದ್ರುಪದ, ಮೇಘ ಮಯೂರಿ, ಸ್ವರ್ಣ ನೂಪುರ, ಅಮೃತ ವರ್ಷಿಣಿ, ಮೇಘ ಮಾಣಿಕ್ಯ ಮೊದಲಾದ ಸೂಪರ್ ಹಿಟ್ ಪ್ರಸಂಗಗಳನ್ನು ರಚಿಸಿ, ಅಭಿನವ ವಾಲ್ಮೀಕಿ ಎಂದು ಅಭಿಮಾನಿಗಳಿಂದ ಕರೆಸಿಕೊಂಡವರು. 32ರಷ್ಟು ಯಕ್ಷಗಾನ ಕೃತಿಗಳನ್ನು ಅವರು ರಚಿಸಿದ್ದಾರೆ.