2017ರಿಂದ ಕಲಾವಿದರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಮೇಳದಿಂದ ಹೊರಹಾಕಿದ ಕಲಾವಿದರ ಪರ ಧ್ವನಿ ಎತ್ತಿದ್ದಕ್ಕಾಗಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಯಿತು. ನ್ಯಾಯ ಕೇಳಿದವರನ್ನು ಶಾಶ್ವತವಾಗಿ ಮೇಳದಿಂದ ಹೊರಹಾಕಲಾಯಿತು. ಅದರ ಮುಂದುವರಿದ ಭಾಗವೇ ಈಗ ನಡೆದಿರುವ ಘಟನೆ ಎಂದರು.
‘19 ವರ್ಷಗಳ ಅವಧಿಯಲ್ಲಿ ನಾನು ಯಾವುದೇ ಬೇಡಿಕೆ ಇರಿಸಿಲ್ಲ. ಮೇಳದ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಅವರು ನೀಡಿದ ಎಲ್ಲ ಸೂಚನೆಗಳನ್ನು ಪಾಲಿಸಿಕೊಂಡು ಬಂದಿದ್ದೇನೆ. ಯಾವತ್ತೂ, ಯಾವುದೇ ವಿಚಾರದಲ್ಲೂ ಬೇಡಿಕೆ ಇಟ್ಟಿಲ್ಲ. ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲವೂ ಆಧಾರರಹಿತ’ ಎಂದು ಹೇಳಿದರು.