<p><strong>ಉಜಿರೆ:</strong> ಭಾನುವಾರ ಅಲ್ಪಕಾಲದ ಅನಾರೋಗ್ಯದಿಂದ ಸಿಂಗಾಪುರದಲ್ಲಿ ನಿಧನರಾದ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ಪಾರ್ಥಿವ ಶರೀರವನ್ನು ಸಿಂಗಪುರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ತರಲಾಯಿತು.</p>.<p>ಇಲ್ಲಿನ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಂತಿಮ ನಮನಗಳೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಬೆಂಗಳೂರಿ ನಿಂದ ಅಂಬುಲೆನ್ಸ್ನಲ್ಲಿ ಪಾರ್ಥಿವ ಶರೀರವನ್ನು ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತರಲಾಯಿತು.</p>.<p>ಅಲ್ಲಿಂದ ವಾಹನ ಜಾಥಾದ ಮೂಲಕ ಉಜಿರೆ ಸರ್ಕಲ್ಗೆ ಬಂದು, ಅಲ್ಲಿಂದ ಎಸ್.ಡಿ.ಎಂ. ಕಾಲೇಜಿಗೆ ತಂದು ಸಾರ್ವಜನಿಕರಿಗೆ ಅಂತಿಮ ನಮನ ಸಮರ್ಪಿಸಲು ಅವಕಾಶ ನೀಡಲಾಯಿತು. ಉಜಿರೆ ನೀರಚಿಲುಮೆ ಬಳಿ ಇರುವ ಡಾ. ಬಿ. ಯಶೋವರ್ಮರ ಸ್ವಗೃಹ ’ನಿನಾದ’ದ ಬಳಿ ಅಂತ್ಯ ಸಂಸ್ಕಾರ ನಡೆಸಲಾಯಿತು.</p>.<p>ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್, ಸದಸ್ಯರಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಭೋಜೇಗೌಡ, ಮೂಡು ಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ, ಜಾನಪದ ವಿ.ವಿ. ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ, ಮಂಗಳೂರು ವಿ.ವಿ. ಕುಲಪತಿ ಡಾ. ಪಿ. ಎಸ್. ಯಡಪಡಿತ್ತಾಯ, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಮೂಡ ಮಾಜಿ ಅಧ್ಯಕ್ಷ ಕೆ. ಸುರೇಶ ಬಳ್ಳಾಲ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಜೇಂದ್ರ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮೊದಲಾದವರು ಶ್ರದ್ಧಾಂಜಲಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಭಾನುವಾರ ಅಲ್ಪಕಾಲದ ಅನಾರೋಗ್ಯದಿಂದ ಸಿಂಗಾಪುರದಲ್ಲಿ ನಿಧನರಾದ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ಪಾರ್ಥಿವ ಶರೀರವನ್ನು ಸಿಂಗಪುರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ತರಲಾಯಿತು.</p>.<p>ಇಲ್ಲಿನ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಂತಿಮ ನಮನಗಳೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಬೆಂಗಳೂರಿ ನಿಂದ ಅಂಬುಲೆನ್ಸ್ನಲ್ಲಿ ಪಾರ್ಥಿವ ಶರೀರವನ್ನು ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತರಲಾಯಿತು.</p>.<p>ಅಲ್ಲಿಂದ ವಾಹನ ಜಾಥಾದ ಮೂಲಕ ಉಜಿರೆ ಸರ್ಕಲ್ಗೆ ಬಂದು, ಅಲ್ಲಿಂದ ಎಸ್.ಡಿ.ಎಂ. ಕಾಲೇಜಿಗೆ ತಂದು ಸಾರ್ವಜನಿಕರಿಗೆ ಅಂತಿಮ ನಮನ ಸಮರ್ಪಿಸಲು ಅವಕಾಶ ನೀಡಲಾಯಿತು. ಉಜಿರೆ ನೀರಚಿಲುಮೆ ಬಳಿ ಇರುವ ಡಾ. ಬಿ. ಯಶೋವರ್ಮರ ಸ್ವಗೃಹ ’ನಿನಾದ’ದ ಬಳಿ ಅಂತ್ಯ ಸಂಸ್ಕಾರ ನಡೆಸಲಾಯಿತು.</p>.<p>ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್, ಸದಸ್ಯರಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಭೋಜೇಗೌಡ, ಮೂಡು ಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ, ಜಾನಪದ ವಿ.ವಿ. ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ, ಮಂಗಳೂರು ವಿ.ವಿ. ಕುಲಪತಿ ಡಾ. ಪಿ. ಎಸ್. ಯಡಪಡಿತ್ತಾಯ, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಮೂಡ ಮಾಜಿ ಅಧ್ಯಕ್ಷ ಕೆ. ಸುರೇಶ ಬಳ್ಳಾಲ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಎಸ್.ಡಿ.ಎಂ. ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಜೇಂದ್ರ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮೊದಲಾದವರು ಶ್ರದ್ಧಾಂಜಲಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>