<p><strong>ಉಜಿರೆ:</strong> ದಕ್ಷ ಆಡಳಿತಗಾರ, ಸಸ್ಯವಿಜ್ಞಾನಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಉಜಿರೆಯನ್ನು ಸಸ್ಯಕಾಶಿಯಾಗಿ ರೂಪಿಸಿದ ಯಶಸ್ಸು ದಿ.ಬಿ.ಯಶೋವರ್ಮ ಅವರಿಗೆ ಸಲ್ಲುತ್ತದೆ ಎಂದು ಡಾ.ಪ್ರದೀಪ್ ನಾವೂರು ಹೇಳಿದರು.</p>.<p>ಉಜಿರೆ ಸಿದ್ಧವನ ಗುರುಕುಲದ ಬಳಿ ಯಶೋವರ್ಮ ಅವರು ರೂಪಿಸಿದ ‘ಯಶೋವನ’ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯಶೋವರ್ಮ ಅವರ 70ನೇ ಜನ್ಮದಿನ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>ವ್ಯಕ್ತಿ ನಿಧನರಾದರೂ ಅವರ ವ್ಯಕ್ತಿತ್ವ ಮತ್ತು ಸಾಧನೆಗಳಿಗೆ ಸಾವಿಲ್ಲ. ಹಲವು ಕ್ಷೇತ್ರಗಳಲ್ಲಿ ಅನುಪಮ ಸೇವೆ, ಸಾಧನೆ ಮಾಡಿದ್ದ ಯಶೋವರ್ಮ ಅವರ ಆದರ್ಶ ಚಿಂತನೆ, ಆದರ್ಶಗಳು ನಮ್ಮೆಲ್ಲರ ಬದುಕಿಗೆ ನಂದಾದೀಪವಾಗಿ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.</p>.<p>ಪರಿಸರ ತಜ್ಞ ಶಿವಾನಂದ ಕಳವೆ ಅವರು ಉಡುಗೊರೆಯಾಗಿ ನೀಡಿದ 40 ಅಡಿಗೂ ಎತ್ತರ ಮತ್ತು ಎರಡು ಎಕರೆಯಷ್ಟು ವಿಸ್ತಾರವಾಗಿ ಬೆಳೆಯುವ ಆಫ್ರಿಕನ್ ವಿಶೇಷ ಸಸಿಗಳನ್ನು ಸೋನಿಯಾ ಯಶೋವರ್ಮ ಮತ್ತು ಕುಟುಂಬದವರು ಯಶೋವನದಲ್ಲಿ ನೆಟ್ಟರು.</p>.<p>ಎಸ್ಡಿಎಂ ಕಾಲೇಜಿನ ಉಪನ್ಯಾಸಕ, ವ್ಯಂಗ್ಯ ಚಿತ್ರಕಾರ ಪ್ರೊ.ಶೈಲೇಶ್ ಉಜಿರೆ ಅವರು ವ್ಯಂಗ್ಯಚಿತ್ರ ರಚನೆ ಕುರಿತು ಮಾಹಿತಿ ನೀಡಿದರು.</p>.<p>ಧರ್ಮಸ್ಥಳದ ರಂಗಶಿವ ತಂಡದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಎಸ್ಡಿಎಂಐಟಿ ಮತ್ತು ವಿದ್ಯಾರ್ಥಿನಿಲಯಗಳ ಆಡಳಿತ ವಿಭಾಗದ ಸಿಇಒ ಪೂರನ್ವರ್ಮ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಪ್ರೊ. ಸುವೀರ್ ಜೈನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ದಕ್ಷ ಆಡಳಿತಗಾರ, ಸಸ್ಯವಿಜ್ಞಾನಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಉಜಿರೆಯನ್ನು ಸಸ್ಯಕಾಶಿಯಾಗಿ ರೂಪಿಸಿದ ಯಶಸ್ಸು ದಿ.ಬಿ.ಯಶೋವರ್ಮ ಅವರಿಗೆ ಸಲ್ಲುತ್ತದೆ ಎಂದು ಡಾ.ಪ್ರದೀಪ್ ನಾವೂರು ಹೇಳಿದರು.</p>.<p>ಉಜಿರೆ ಸಿದ್ಧವನ ಗುರುಕುಲದ ಬಳಿ ಯಶೋವರ್ಮ ಅವರು ರೂಪಿಸಿದ ‘ಯಶೋವನ’ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯಶೋವರ್ಮ ಅವರ 70ನೇ ಜನ್ಮದಿನ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>ವ್ಯಕ್ತಿ ನಿಧನರಾದರೂ ಅವರ ವ್ಯಕ್ತಿತ್ವ ಮತ್ತು ಸಾಧನೆಗಳಿಗೆ ಸಾವಿಲ್ಲ. ಹಲವು ಕ್ಷೇತ್ರಗಳಲ್ಲಿ ಅನುಪಮ ಸೇವೆ, ಸಾಧನೆ ಮಾಡಿದ್ದ ಯಶೋವರ್ಮ ಅವರ ಆದರ್ಶ ಚಿಂತನೆ, ಆದರ್ಶಗಳು ನಮ್ಮೆಲ್ಲರ ಬದುಕಿಗೆ ನಂದಾದೀಪವಾಗಿ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.</p>.<p>ಪರಿಸರ ತಜ್ಞ ಶಿವಾನಂದ ಕಳವೆ ಅವರು ಉಡುಗೊರೆಯಾಗಿ ನೀಡಿದ 40 ಅಡಿಗೂ ಎತ್ತರ ಮತ್ತು ಎರಡು ಎಕರೆಯಷ್ಟು ವಿಸ್ತಾರವಾಗಿ ಬೆಳೆಯುವ ಆಫ್ರಿಕನ್ ವಿಶೇಷ ಸಸಿಗಳನ್ನು ಸೋನಿಯಾ ಯಶೋವರ್ಮ ಮತ್ತು ಕುಟುಂಬದವರು ಯಶೋವನದಲ್ಲಿ ನೆಟ್ಟರು.</p>.<p>ಎಸ್ಡಿಎಂ ಕಾಲೇಜಿನ ಉಪನ್ಯಾಸಕ, ವ್ಯಂಗ್ಯ ಚಿತ್ರಕಾರ ಪ್ರೊ.ಶೈಲೇಶ್ ಉಜಿರೆ ಅವರು ವ್ಯಂಗ್ಯಚಿತ್ರ ರಚನೆ ಕುರಿತು ಮಾಹಿತಿ ನೀಡಿದರು.</p>.<p>ಧರ್ಮಸ್ಥಳದ ರಂಗಶಿವ ತಂಡದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಎಸ್ಡಿಎಂಐಟಿ ಮತ್ತು ವಿದ್ಯಾರ್ಥಿನಿಲಯಗಳ ಆಡಳಿತ ವಿಭಾಗದ ಸಿಇಒ ಪೂರನ್ವರ್ಮ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಪ್ರೊ. ಸುವೀರ್ ಜೈನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>