<p><strong>ಮಂಗಳೂರು:</strong> ‘ಇಂದಿನ ಕಾಲಘಟ್ಟದಲ್ಲಿ ಸಂವೇದನೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಮೌಲ್ಯಗಳು ನಶಿಸಿಹೋಗುತ್ತಿವೆ. ಶಿಕ್ಷಣವು ಯಾಂತ್ರಿಕವಾಗಿದೆ’ ಎಂದು ಲೇಖಕ ಡಾ.ನರೇಂದ್ರ ರೈ ದೇರ್ಲ ಕಳವಳ ವ್ಯಕ್ತಪಡಿಸಿದರು.</p>.<p>ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ರಚಿಸಿದ ‘ಯತೀಮ್’ ಕನ್ನಡ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಸಹಿಸುವ ಗುಣ ಮರೆಯಾಗಿ ಮನೋಸ್ಥೈರ್ಯ ಕುಸಿಯುತ್ತಿರುವ ಇಂದಿನ ಸನ್ನಿವೇಶದಲ್ಲಿ ನಾವು ಪುಸ್ತಕದ ಪುಟ ತಿರುಗಿಸಿದರೆ ಸಾಲದು. ನಮ್ಮ ಅಂತರಂಗದ ಕಟ್ಟು ಬಿಚ್ಚಿ ಒಳಗಿನ ಕತ್ತಲೆಯನ್ನು ಓಡಿಸಬೇಕು. ಯಾಂತ್ರಿಕತೆಯಿಂದ ಹೊರಬರುವ ಪ್ರಯತ್ನ ಮಾಡಬೇಕು’ ಎಂದರು. </p>.<p>‘ಕೇವಲ ‘ಯತೀಮ್’ (ಅನಾಥ) ಮಕ್ಕಳಲ್ಲಿ ಮಾತ್ರ ಅನಾಥಪ್ರಜ್ಞೆ ಇರುವುದಲ್ಲ. ಅದು ಜಗತ್ತಿನ ಪ್ರತಿಯೊಬ್ಬರನ್ನೂ ಒಂದಿಲ್ಲ ಒಂದು ಹಂತದಲ್ಲಿ ಕಾಡುತ್ತದೆ. ಅದನ್ನು ಮೆಟ್ಟಿನಿಂತು ಮನುಷ್ಯರಾಗಲು ಯತ್ನಿಸಬೇಕು’ ಎಂದರು.</p>.<p>ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ‘ಯತೀಂ’ ಕಾದಂಬರಿಯನ್ನು ಇಲ್ಲಿ ಬಿಡುಗಡೆಗೊಳಿಸಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ಜೀವನ್ರಾಜ್ ಕುತ್ತಾರ್ ಮಾತನಾಡಿದರು. ಉಪಪ್ರಾಂಶುಪಾಲ ನಾರಾಯಣ ಸುಕುಮಾರ ಇದ್ದರು. ಕೃತಿಯ ಲೇಖಕ ನಿಯಾಝ್ ಪಡೀಲ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಚೈತ್ರಾ ವಂದಿಸಿದರು. ಸಹ ಪ್ರಾಧ್ಯಾಪಕ ಡಾ. ದಿನಕರ್ ಪಚ್ಚನಾಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಇಂದಿನ ಕಾಲಘಟ್ಟದಲ್ಲಿ ಸಂವೇದನೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಮೌಲ್ಯಗಳು ನಶಿಸಿಹೋಗುತ್ತಿವೆ. ಶಿಕ್ಷಣವು ಯಾಂತ್ರಿಕವಾಗಿದೆ’ ಎಂದು ಲೇಖಕ ಡಾ.ನರೇಂದ್ರ ರೈ ದೇರ್ಲ ಕಳವಳ ವ್ಯಕ್ತಪಡಿಸಿದರು.</p>.<p>ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ರಚಿಸಿದ ‘ಯತೀಮ್’ ಕನ್ನಡ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಸಹಿಸುವ ಗುಣ ಮರೆಯಾಗಿ ಮನೋಸ್ಥೈರ್ಯ ಕುಸಿಯುತ್ತಿರುವ ಇಂದಿನ ಸನ್ನಿವೇಶದಲ್ಲಿ ನಾವು ಪುಸ್ತಕದ ಪುಟ ತಿರುಗಿಸಿದರೆ ಸಾಲದು. ನಮ್ಮ ಅಂತರಂಗದ ಕಟ್ಟು ಬಿಚ್ಚಿ ಒಳಗಿನ ಕತ್ತಲೆಯನ್ನು ಓಡಿಸಬೇಕು. ಯಾಂತ್ರಿಕತೆಯಿಂದ ಹೊರಬರುವ ಪ್ರಯತ್ನ ಮಾಡಬೇಕು’ ಎಂದರು. </p>.<p>‘ಕೇವಲ ‘ಯತೀಮ್’ (ಅನಾಥ) ಮಕ್ಕಳಲ್ಲಿ ಮಾತ್ರ ಅನಾಥಪ್ರಜ್ಞೆ ಇರುವುದಲ್ಲ. ಅದು ಜಗತ್ತಿನ ಪ್ರತಿಯೊಬ್ಬರನ್ನೂ ಒಂದಿಲ್ಲ ಒಂದು ಹಂತದಲ್ಲಿ ಕಾಡುತ್ತದೆ. ಅದನ್ನು ಮೆಟ್ಟಿನಿಂತು ಮನುಷ್ಯರಾಗಲು ಯತ್ನಿಸಬೇಕು’ ಎಂದರು.</p>.<p>ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ‘ಯತೀಂ’ ಕಾದಂಬರಿಯನ್ನು ಇಲ್ಲಿ ಬಿಡುಗಡೆಗೊಳಿಸಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ಜೀವನ್ರಾಜ್ ಕುತ್ತಾರ್ ಮಾತನಾಡಿದರು. ಉಪಪ್ರಾಂಶುಪಾಲ ನಾರಾಯಣ ಸುಕುಮಾರ ಇದ್ದರು. ಕೃತಿಯ ಲೇಖಕ ನಿಯಾಝ್ ಪಡೀಲ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಚೈತ್ರಾ ವಂದಿಸಿದರು. ಸಹ ಪ್ರಾಧ್ಯಾಪಕ ಡಾ. ದಿನಕರ್ ಪಚ್ಚನಾಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>