ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ | ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಕೊಲೆ ಶಂಕೆ

Last Updated 1 ಫೆಬ್ರುವರಿ 2023, 6:12 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೊನಿಯ ಬಾಡಿಗೆ ಮನೆಯಲ್ಲಿ ಯುವತಿಯೊಬ್ಬರು ಜನವರಿ 30ರಂದು ಮೃತಪಟ್ಟಿದ್ದರು. ಇದೀಗ ಕೊಲೆಯಾಗಿರುವ ಸಂಶಯ ವ್ಯಕ್ತವಾಗುತ್ತಿದೆ.

ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಯುವತಿಯ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಲಾಗಿತ್ತು. ಹಾಗಾಗಿ ಯುವತಿಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಛತ್ತೀಸಗಢದ ಸರಿತಾ ವರ್ಮ (23) ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಯುವತಿ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜನವರಿ 30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು.

ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಅವರು ಕೆಳಗಿನ ಅಂತಸ್ತಿನಲ್ಲಿ ಇದ್ದಾರೆ. ಮೇಲಿನ ಅಂತಸ್ತಿನಲ್ಲಿ ಸರಿತಾ ಅವರ ಕುಟುಂಬ ವಾಸವಾಗಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಶ್ರವಣ ದೋಷ ಹೊಂದಿದ್ದರು.

ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿರುವ ಸಾಧ್ಯತೆ ಇದೆ ಎಂದು ಉಳ್ಳಾಲ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ದ ಮಾಲೀಕರಿಗೆ ಯುವಕನೊಬ್ಬ ನಿತ್ಯ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಮಾತ್ರ ಕಂಪೌಂಡ್ ಪ್ರವೇಶಿಸಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವ ಪೊಲೀಸರು ಸಂಶಯಾಸ್ಪದರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT