<p><strong>ಮೂಲ್ಕಿ:</strong> ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಖಿನ್ನತೆಗೊಳಗಾಗಿ ಯುವಕ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಮೈಲೊಟ್ಟು ನಿವಾಸಿ ಕಾರ್ತಿಕ್ (20) ಮೃತ ಯುವಕ. ಅವರು ಮೂಡಬಿದಿರೆ ತಾಲ್ಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದರು. ಆಕೆಯ ತಾಯಿಯ ಮನೆ ಮೂಲ್ಕಿಯಲ್ಲಿತ್ತು. ಇಲ್ಲಿನ ಕಾಲೇಜೊಂದರಲ್ಲಿ ಬಿಬಿಎಂ ಓದುತ್ತಿದ್ದಾಗ ಅವರ ನಡುವೆ ಪ್ರೀತಿ ಬೆಳೆದಿತ್ತು ಎಂದು ಕಾರ್ತಿಕ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಮನೆಯಲ್ಲಿ ಇಬ್ಬರ ಪ್ರೀತಿಯ ವಿಷಯ ತಿಳಿದ ಬಳಿಕ ಯುವತಿಯನ್ನು ಆಕೆಯ ಮನೆಯವರು ಕಾಲೇಜು ಬಿಡಿಸಿ, ಮೂಡುಬಿದಿರೆಯ ಮನೆಯಲ್ಲೇ ಉಳಿಸಿಕೊಂಡಿದ್ದರು. ಆ ಯುವತಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಾರ್ತಿಕ್ ಆಕೆಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಶನಿವಾರ ಮೂಡಬಿದಿರೆಗೆ ತೆರಳಿದ್ದರು. ಆಕೆಯ ಮೃತದೇಹವನ್ನು ವೀಕ್ಷಿಸಲು ಮನೆಯವರು ಅವಕಾಶ ನೀಡಿರಲಿಲ್ಲ. ಇದರಿಂದ ಯುವಕ ಬೇಸರಗೊಂಡಿದ್ದ ಎಂದು ಆತನ ನಿಕಟವರ್ತಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಖಿನ್ನತೆಗೊಳಗಾಗಿ ಯುವಕ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಮೈಲೊಟ್ಟು ನಿವಾಸಿ ಕಾರ್ತಿಕ್ (20) ಮೃತ ಯುವಕ. ಅವರು ಮೂಡಬಿದಿರೆ ತಾಲ್ಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದರು. ಆಕೆಯ ತಾಯಿಯ ಮನೆ ಮೂಲ್ಕಿಯಲ್ಲಿತ್ತು. ಇಲ್ಲಿನ ಕಾಲೇಜೊಂದರಲ್ಲಿ ಬಿಬಿಎಂ ಓದುತ್ತಿದ್ದಾಗ ಅವರ ನಡುವೆ ಪ್ರೀತಿ ಬೆಳೆದಿತ್ತು ಎಂದು ಕಾರ್ತಿಕ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಮನೆಯಲ್ಲಿ ಇಬ್ಬರ ಪ್ರೀತಿಯ ವಿಷಯ ತಿಳಿದ ಬಳಿಕ ಯುವತಿಯನ್ನು ಆಕೆಯ ಮನೆಯವರು ಕಾಲೇಜು ಬಿಡಿಸಿ, ಮೂಡುಬಿದಿರೆಯ ಮನೆಯಲ್ಲೇ ಉಳಿಸಿಕೊಂಡಿದ್ದರು. ಆ ಯುವತಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಾರ್ತಿಕ್ ಆಕೆಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಶನಿವಾರ ಮೂಡಬಿದಿರೆಗೆ ತೆರಳಿದ್ದರು. ಆಕೆಯ ಮೃತದೇಹವನ್ನು ವೀಕ್ಷಿಸಲು ಮನೆಯವರು ಅವಕಾಶ ನೀಡಿರಲಿಲ್ಲ. ಇದರಿಂದ ಯುವಕ ಬೇಸರಗೊಂಡಿದ್ದ ಎಂದು ಆತನ ನಿಕಟವರ್ತಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>