<p><strong>ಮಂಗಳೂರು</strong>: ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕೆಲಹೊತ್ತು ಆತಂಕ ಸೃಷ್ಟಿಸಿದ್ದು, ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. </p>.<p>ಬಾಗಲಕೋಟೆ ಜಿಲ್ಲೆ ಹುನಗುಂದದ ಭೀಮಪ್ಪ ತಳವಾರ (24) ಮರ ಏರಿದ್ದ ಯುವಕ.</p>.<p>‘ಅಂದಾಜು 50 ಅಡಿ ಎತ್ತರದ ಮರ ಹತ್ತಿ ಆ ಯುವಕ ಕುಳಿತಿದ್ದ. ಆತನನ್ನು ಕೆಳಗಿಳಿಸಲು ಸಾಕಷ್ಟು ಪ್ರಯತ್ನಿಸಿದೆವು. ಆತ ಇಳಿಯಲು ಒಪ್ಪಲಿಲ್ಲ. ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದರು. ಪೊಲೀಸರು, ಅಗ್ನಿಶಾಮಕ ದಳದವರು ಬಂದು ಯುವಕನ ಮನವೊಲಿಸಿ, ಮರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದೆ. ಇಲ್ಲಿ ಕೆಲಸವೂ ಸಿಗಲಿಲ್ಲ. ನನ್ನ ಜೊತೆ ಬಂದವರೂ ಊರಿಗೆ ಮರಳಿದ್ದಾರೆ. ಇದರಿಂದ ಬೇಸರವಾಗಿತ್ತು’ ಎಂದು ಆ ಯುವಕ ಸ್ಥಳೀಯರ ಬಳಿ ಹೇಳಿಕೊಂಡಿದ್ದ. ಮರದಿಂದ ಇಳಿದ ಮೇಲೆ ಆತನನ್ನು ತಪಾಸಣೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ಅವರು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕೆಲಹೊತ್ತು ಆತಂಕ ಸೃಷ್ಟಿಸಿದ್ದು, ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. </p>.<p>ಬಾಗಲಕೋಟೆ ಜಿಲ್ಲೆ ಹುನಗುಂದದ ಭೀಮಪ್ಪ ತಳವಾರ (24) ಮರ ಏರಿದ್ದ ಯುವಕ.</p>.<p>‘ಅಂದಾಜು 50 ಅಡಿ ಎತ್ತರದ ಮರ ಹತ್ತಿ ಆ ಯುವಕ ಕುಳಿತಿದ್ದ. ಆತನನ್ನು ಕೆಳಗಿಳಿಸಲು ಸಾಕಷ್ಟು ಪ್ರಯತ್ನಿಸಿದೆವು. ಆತ ಇಳಿಯಲು ಒಪ್ಪಲಿಲ್ಲ. ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದರು. ಪೊಲೀಸರು, ಅಗ್ನಿಶಾಮಕ ದಳದವರು ಬಂದು ಯುವಕನ ಮನವೊಲಿಸಿ, ಮರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದೆ. ಇಲ್ಲಿ ಕೆಲಸವೂ ಸಿಗಲಿಲ್ಲ. ನನ್ನ ಜೊತೆ ಬಂದವರೂ ಊರಿಗೆ ಮರಳಿದ್ದಾರೆ. ಇದರಿಂದ ಬೇಸರವಾಗಿತ್ತು’ ಎಂದು ಆ ಯುವಕ ಸ್ಥಳೀಯರ ಬಳಿ ಹೇಳಿಕೊಂಡಿದ್ದ. ಮರದಿಂದ ಇಳಿದ ಮೇಲೆ ಆತನನ್ನು ತಪಾಸಣೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ಅವರು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>