ಅಡ್ಕತ್ತಬೈಲಿನ ಅಲ್ ರೊಮಾನ್ಸಿಯಾ ಎಂಬ ಹೆಸರಿನ ಹೋಟೆಲ್ನಿಂದ ಜ.1ರಂದು ಆನ್ಲೈನ್ ಮೂಲಕ ‘ಕುಳಿಮಂದಿ’ ಖಾದ್ಯವನ್ನು ಅಂಜುಶ್ರೀ ತರಿಸಿದ್ದರು. ಅದನ್ನು ಸೇವಿಸಿದ ನಂತರ ಅಸ್ವಸ್ಥಗೊಂಡ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.