ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್, ನಿರಾಶ್ರಿತರು, ನೊಂದವರಿಗೆ ಸಹಾಯಹಸ್ತ ಚಾಚಿದೆ. ಯುವ ಕಾಂಗ್ರೆಸ್ ಸಹಾಯವಾಣಿಗೆ 1,912 ಕರೆಗಳು ಬಂದಿದ್ದು, ಅವುಗಳಲ್ಲಿ ಶೇ 90 ಕರೆಗಳಿಗೆ ಸ್ಪಂದಿಸಲಾಗಿದೆ. 202 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೆ, 99 ಜನರ ಬಿಡುಗಡೆಗೆ ಸಹಕಾರ, 42 ರೋಗಿಗಳಿಗೆ ಆಮ್ಲಜನಕ, 153 ಮಂದಿಗೆ ಔಷಧ, ಇಬ್ಪರಿಗೆ ಪ್ಲಾಸ್ಮಾ, 130 ಮಂದಿಗೆ ಲಸಿಕೆ, 204 ರೋಗಿಗಳಿಗೆ ಆಂಬುಲೆನ್ಸ್ ನೆರವು, 94 ಯೂನಿಟ್ ರಕ್ತದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾದ್ಯಂತ ಬೀದಿ ಬದಿ ಇರುವ ನಿರಾಶ್ರಿತರು ಸೇರಿದಂತೆ 13,730 ಮಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. 148 ರೋಗಿಗಳಿಗೆ ರಕ್ತದ ವ್ಯವಸ್ಥೆ ಮಾಡಲಾಗಿದ್ದು, ಇವೆಲ್ಲದರ ದಾಖಲೆಗಳು ನಮ್ಮಲ್ಲಿವೆ ಎಂದು ತಿಳಿಸಿದರು.