<p><strong>ಉಳ್ಳಾಲ</strong>: ವೈದ್ಯರ ಬಳಿ ತಪಾಸಣೆಗೆಂದು ತೆರಳಿದ್ದ ಯುವಕ ಕುಸಿದು ಬಿದ್ದು ಸಾವ ನ್ನಪ್ಪಿರುವ ಘಟನೆ ನಗರದ ಕೆ.ಎಂ.ಸಿ ಆಸ್ಪತ್ರೆ ಯಲ್ಲಿ ಸಂಭವಿಸಿದೆ.</p>.<p>ಕುಂಪಲ ಆಶ್ರಯ ಕಾಲೊನಿ ನಿವಾಸಿ ರಿಕ್ಷಾ ಚಾಲಕ ರಾಜೇಶ್ ರಾವ್ (31) ಮೃತರು.</p>.<p>ಹೃದಯ ಸಂಬಂಧಿತ ಸಮಸ್ಯೆಗಾಗಿ ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಅಲ್ಲಿ ಅಧಿಕ ರಕ್ತದೊತ್ತಡ ಇರುವುದನ್ನು ವೈದ್ಯರು ತಿಳಿಸಿದ್ದರು. ಎದೆನೋವು ಕಡಿಮೆಯಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಈ ವೇಳೆ ಪ್ರಕಾಶ್ ಅವರಿಗೆ ಸೇರಿದ ಕಾರನ್ನು ರಾಜೇಶ್ ರಾವ್ ಅವರೇ ಮಂಗಳೂರಿನವರೆಗೆ ಚಲಾಯಿಸಿದ್ದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ರಕ್ತದೊತ್ತಡ ವನ್ನು ಪರೀಕ್ಷಿಸಲು ಮುಂದಾಗುತ್ತಿದ್ದಂತೆ ರಾಜೇಶ್ ರಾವ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮೇಲ್ನೋಟಕ್ಕೆ ವೈದ್ಯರು ತಿಳಿಸಿದ್ದಾರೆ.</p>.<p>ಮೃತರಿಗೆ ತಂದೆ, ತಾಯಿ ಹಾಗೂ ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ವೈದ್ಯರ ಬಳಿ ತಪಾಸಣೆಗೆಂದು ತೆರಳಿದ್ದ ಯುವಕ ಕುಸಿದು ಬಿದ್ದು ಸಾವ ನ್ನಪ್ಪಿರುವ ಘಟನೆ ನಗರದ ಕೆ.ಎಂ.ಸಿ ಆಸ್ಪತ್ರೆ ಯಲ್ಲಿ ಸಂಭವಿಸಿದೆ.</p>.<p>ಕುಂಪಲ ಆಶ್ರಯ ಕಾಲೊನಿ ನಿವಾಸಿ ರಿಕ್ಷಾ ಚಾಲಕ ರಾಜೇಶ್ ರಾವ್ (31) ಮೃತರು.</p>.<p>ಹೃದಯ ಸಂಬಂಧಿತ ಸಮಸ್ಯೆಗಾಗಿ ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಅಲ್ಲಿ ಅಧಿಕ ರಕ್ತದೊತ್ತಡ ಇರುವುದನ್ನು ವೈದ್ಯರು ತಿಳಿಸಿದ್ದರು. ಎದೆನೋವು ಕಡಿಮೆಯಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಈ ವೇಳೆ ಪ್ರಕಾಶ್ ಅವರಿಗೆ ಸೇರಿದ ಕಾರನ್ನು ರಾಜೇಶ್ ರಾವ್ ಅವರೇ ಮಂಗಳೂರಿನವರೆಗೆ ಚಲಾಯಿಸಿದ್ದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ರಕ್ತದೊತ್ತಡ ವನ್ನು ಪರೀಕ್ಷಿಸಲು ಮುಂದಾಗುತ್ತಿದ್ದಂತೆ ರಾಜೇಶ್ ರಾವ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮೇಲ್ನೋಟಕ್ಕೆ ವೈದ್ಯರು ತಿಳಿಸಿದ್ದಾರೆ.</p>.<p>ಮೃತರಿಗೆ ತಂದೆ, ತಾಯಿ ಹಾಗೂ ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>