ಹೃದಯ ಸಂಬಂಧಿತ ಸಮಸ್ಯೆಗಾಗಿ ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಅಲ್ಲಿ ಅಧಿಕ ರಕ್ತದೊತ್ತಡ ಇರುವುದನ್ನು ವೈದ್ಯರು ತಿಳಿಸಿದ್ದರು. ಎದೆನೋವು ಕಡಿಮೆಯಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಈ ವೇಳೆ ಪ್ರಕಾಶ್ ಅವರಿಗೆ ಸೇರಿದ ಕಾರನ್ನು ರಾಜೇಶ್ ರಾವ್ ಅವರೇ ಮಂಗಳೂರಿನವರೆಗೆ ಚಲಾಯಿಸಿದ್ದರು.