ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ಕುಸಿದು ಯುವಕ ಸಾವು

Last Updated 29 ಜೂನ್ 2021, 6:26 IST
ಅಕ್ಷರ ಗಾತ್ರ

ಉಳ್ಳಾಲ: ವೈದ್ಯರ ಬಳಿ ತಪಾಸಣೆಗೆಂದು ತೆರಳಿದ್ದ ಯುವಕ ಕುಸಿದು ಬಿದ್ದು ಸಾವ ನ್ನಪ್ಪಿರುವ ಘಟನೆ ನಗರದ ಕೆ.ಎಂ.ಸಿ ಆಸ್ಪತ್ರೆ ಯಲ್ಲಿ ಸಂಭವಿಸಿದೆ.

ಕುಂಪಲ ಆಶ್ರಯ ಕಾಲೊನಿ ನಿವಾಸಿ ರಿಕ್ಷಾ ಚಾಲಕ ರಾಜೇಶ್ ರಾವ್ (31) ಮೃತರು.

ಹೃದಯ ಸಂಬಂಧಿತ ಸಮಸ್ಯೆಗಾಗಿ ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಅಲ್ಲಿ ಅಧಿಕ ರಕ್ತದೊತ್ತಡ ಇರುವುದನ್ನು ವೈದ್ಯರು ತಿಳಿಸಿದ್ದರು. ಎದೆನೋವು ಕಡಿಮೆಯಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಈ ವೇಳೆ ಪ್ರಕಾಶ್ ಅವರಿಗೆ ಸೇರಿದ ಕಾರನ್ನು ರಾಜೇಶ್ ರಾವ್ ಅವರೇ ಮಂಗಳೂರಿನವರೆಗೆ ಚಲಾಯಿಸಿದ್ದರು.

ಆಸ್ಪತ್ರೆಯಲ್ಲಿ ವೈದ್ಯರು ರಕ್ತದೊತ್ತಡ ವನ್ನು ಪರೀಕ್ಷಿಸಲು ಮುಂದಾಗುತ್ತಿದ್ದಂತೆ ರಾಜೇಶ್ ರಾವ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮೇಲ್ನೋಟಕ್ಕೆ ವೈದ್ಯರು ತಿಳಿಸಿದ್ದಾರೆ.

ಮೃತರಿಗೆ ತಂದೆ, ತಾಯಿ ಹಾಗೂ ಸಹೋದರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT