ಮಂಗಳೂರು: ಯುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರಿಗೆ ಫೇಸ್ಬುಕ್ನಲ್ಲಿ ಬೆದರಿಕೆ ಹಾಕಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
‘ಫೇಸ್ಬುಕ್ನಲ್ಲಿ ರಾಮ್ಪ್ರಸಾದ್ ಎಂಬ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ನಾನು ಉದ್ಯಮ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಮಾಜ ಸೇವೆ ಹಾಗೂ ಯುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಆತನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ’ ದೂರಿನಲ್ಲಿ ಆಗ್ರಹಿಸಿದ್ದಾರೆ.
ಜಿಲ್ಲಾ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಉಪಾಧ್ಯಕ್ಷ ಮೊಹಮ್ಮದ್ ಆಸಿಫ್, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಫೈಝಲ್, ಮಂಗಳೂರು ಉತ್ತರ ಕ್ಷೇತ್ರಾಧ್ಯಕ್ಷ ರತೀಶ್ ಕರ್ಕೇರ, ಉಪಾಧ್ಯಕ್ಷ ಹಿತೇಶ್ ರೈ ಇದ್ದರು.