ಪಿಟೀಲಿನಲ್ಲಿ ಮಂಗಳೂರಿನ ಧನಶ್ರೀ ಶಭರಾಯ ಹಾಗೂ ಗೌತಮ್ ಭಟ್, ಮೃದಂಗದಲ್ಲಿ ಅವನೀಶ್ ಬೆಳ್ಳಾರೆ ಮತ್ತು ಪವನ್ ಪುತ್ತೂರು ಸಹಕರಿಸಲಿದ್ದಾರೆ. ಸಂಜೆ 5ಕ್ಕೆ ಕೇರಳದ ಕೊಚ್ಚಿಯ ಹರಿಪ್ರಸಾದ್ ಸುಬ್ರಮಣಿಯನ್ ಅವರ ಕೊಳಲು ವಾದನ ಇರುತ್ತದೆ. ಬೆಂಗಳೂರಿನ ವೈಭವ ರಮಣಿ (ಪಿಟೀಲು), ಚೆನ್ನೈನ ಹರಿಹರನ್ ಸುಂದರರಾಮನ್ (ಮೃದಂಗ) ಮತ್ತು ಮಂಗಳೂರಿನ ಸುಮುಖ ಕಾರಂತ (ಖಂಜೀರ) ಪಕ್ಕವಾದ್ಯ ನುಡಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶಾವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.