ಮಂಗಳೂರು: ಗುಡ್ಡಕೊಪ್ಲ ಕಡಲ ಕಿನಾರೆಗೆ ಬಂದಿದ್ದ ಪುತ್ತೂರಿನ ಯುವಕನ್ನು ಮೀನುಗಾರರು ರಕ್ಷಿಸಿದ್ದಾರೆ.
ವಿಹಾರಕ್ಕೆ ಬಂದ ಯುವಕರು ಸ್ಥಳೀಯ ಮೊಗವೀರರ ಎಚ್ಚರಿಕೆಗೂ ಗಮನ ಕೊಡದೆ ಕಡಲಲ್ಲಿ ಈಜುತ್ತಿರುವಾಗ ಕಡಲ ಅಲೆ ಅವರನ್ನು ಕಡಲ ಮಧ್ಯದಲ್ಲಿ ಎಳೆದೊಯ್ಯಿತು.
ಮುಳುಗುವ ಹಂತದಲ್ಲಿ ಇರುವ ಡ್ರಜ್ಜರನ್ನು ಹಿಡಿದ ಯುವಕ ಸಹಾಯಕ್ಕೆ ಅಂಗಲಾಚುತ್ತಿದ್ದ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಆಗಲಿ ಕರಾವಳಿ ರಕ್ಷಣಾ ಪಡೆಗಾಗಲಿ ಡ್ರಜ್ಜರ್ ಕಡೆಗೆ ಹೋಗಿ ಯುವಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.
ಸ್ಥಳೀಯ ಮೊಗವೀರ ಯುವಕರಾದ ಯಾದವ ಶ್ರೀಯಾನ್ ಮತ್ತು ಸುಮನ್ ಈಜುತ್ತಾ ಡ್ರಜ್ಜರ್ ಕಡೆಗೆ ಹೋಗಿ ಯುವಕನನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಿದರು.