ಸುಬ್ರಹ್ಮಣ್ಯ: ಇಲ್ಲಿ ಭಾನುವಾರ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಮಂಡ್ಯದ ಶಿವು (25) ನಾಪತ್ತೆಯಾಗಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅವರು, ಸ್ನೇಹಿತರೊಂದಿಗೆ ಬಂದಿದ್ದರು. ‘ಅವರಿಗೆ ಈಜು ಬರುತ್ತದೆ’ ಎಂದು ಸ್ನೇಹಿತರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಪತ್ತೆ ಕಾರ್ಯಚರಣೆ ನಡೆಸುತ್ತಿದೆ.