ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಣಿಯಾಗಿ, ನೆಹರೂ ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವಯುವಕ ಮಂಡಲ ಅಥವಾ ಯುವತಿ ಮಂಡಳಿಗಳು ಇದೇ 17ರ ಒಳಗೆ ಅರ್ಜಿ ಸಲ್ಲಿಸಬಹುದು. 2021-22ರಲ್ಲಿ ಗ್ರಾಮ , ಪಟ್ಟಣ, ತಾಲ್ಲೂಕುಗಳಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸಂಸ್ಥೆಗೆ ₹ 25 ಸಾವಿರ, ರಾಜ್ಯ ಮಟ್ಟದ ಪ್ರಥಮ ಸ್ಥಾನ ಪಡೆಯುವ ಸಂಸ್ಥೆಗೆ ₹ 75ಸಾವಿರ, ದ್ವಿತೀಯ ಸ್ಥಾನಕ್ಕೆ ₹ 50ಸಾವಿರ ಹಾಗೂ ತೃತೀಯ ಸ್ಥಾನಕ್ಕೆ ₹ 25ಸಾವಿರ ಬಹುಮಾನವಿದೆ.