ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ನಾಳೆ ಉಪ್ಪಿನಂಗಡಿಯಲ್ಲಿ ಯುವಜನೋತ್ಸವ

Published 29 ನವೆಂಬರ್ 2023, 12:51 IST
Last Updated 29 ನವೆಂಬರ್ 2023, 12:51 IST
ಅಕ್ಷರ ಗಾತ್ರ

ಪುತ್ತೂರು: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) 30ನೇ ವರ್ಷಾಚರಣೆಯ ಪ್ರಚಾರಾರ್ಥವಾಗಿ ಉಪ್ಪಿನಂಗಡಿಯ ಎಚ್.ಎಂ ಅಡಿಟೋರಿಯಂ ಮುಂಭಾಗದಲ್ಲಿ ಗುರುವಾರ ಸಂಜೆ 4 ಗಂಟೆಗೆ ಬೃಹತ್ ಸುನ್ನಿ ಸಮಾವೇಶ `ಯುವಜನೋತ್ಸವ' ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ಹೇಳಿದರು.

ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಬದುಕಿನಲ್ಲಿ ಸೌಹಾರ್ದತೆಯನ್ನು ಬಿಂಬಿಸುವುದು ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ’ ಎಂದರು.

ಅಬ್ದುಲ್ ವಹ್ವಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ ಮಾಡುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸುವರು. ಎಚ್.ಎಂ ಅಡಿಟೋರಿಯಂ ಮುಂಭಾಗದಿಂದ ಸಂದೇಶ ರ್‍ಯಾಲಿ ಆರಂಭಗೊಂಡು ಉಪ್ಪಿನಂಗಡಿಯ ಮುಖ್ಯ ಬೀದಿಯಲ್ಲಿ ಸಾಗಲಿದೆ. ಬೆಳ್ತಂಗಡಿ, ಕಡಬ, ಸುಳ್ಯ, ಉಪ್ಪಿನಂಗಡಿ, ಪುತ್ತೂರು, ವಿಟ್ಲ ವ್ಯಾಪ್ತಿಯನ್ನೊಳಗೊಂಡ ಈಸ್ಟ್ ಎಸ್‌ವೈಎಸ್ ಸಂಘಟನೆಯಲ್ಲಿ ಸದ್ಯ 12 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಯುವಜನೋತ್ಸವ ನಿರ್ವಹಣಾ ಸಮಿತಿಯ ಕಾರ್ಯಾಧ್ಯಕ್ಷ ಅಬ್ದುಲ್ ಕರೀಂ ಹಾಜಿ ಚೆನ್ನಾರ್, ನಿರ್ವಹಣಾ ಸಮಿತಿ ಕೋಶಾಧಿಕಾರಿ ಮುಸ್ತಾಫಾ ಕೋಡಪದವು, ಸಮಿತಿ ಸಂಯೋಜಕ ಸಲೀಂ ಕನ್ಯಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT