ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಲು ತೆರಳಿದಾಗ, ಅಲ್ಲಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಮೃತ ಬಾಲಕಿಯ ಶವವನ್ನು ಇಟ್ಟು ಅಹೋರಾತ್ರಿ ಸ್ಥಳದಲ್ಲಿಯೇ ಧರಣಿ ನಡೆಸಿದರೂ, ಯಾವೊಬ್ಬ ಅಧಿಕಾರಿಯೂ ಪೋಷಕರ ದೂರನ್ನು ದಾಖಲಿಸಿಕೊಂಡಿಲ್ಲ ಎಂದು ದೂರಿದರು.