<p><strong>ಮಂಗಳೂರು: </strong>ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಗಳಿಕೆಗೆ ಕಾಲೇಜು- ಉದ್ಯಮ ಸಂಪರ್ಕ ಉತ್ತಮವಾಗಿರಬೇಕಿರುವುದು ಅತ್ಯಗತ್ಯ ಎಂದು ಉದ್ಯಮಿ ಕೇಶವ ಜಿ. ಪ್ರಭು ಹೇಳಿದರು.<br /> <br /> ಸೇಂಟ್ ಅಲೊಷಿಯಸ್ ಕಾಲೇಜಿನ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗ ವತಿಯಿಂದ ಶುಕ್ರವಾರ ಎರಿಕ್ ಮಥಾಯಸ್ ಸಭಾಂಗಣ ದಲ್ಲಿ ಏರ್ಪಡಿಸಿದ್ದ `ಅನಾಲಿಸ್ಟ್~- ಅನಾಲಿ ಟಿಕಲ್ ಕೆಮಿಸ್ಟ್ರಿ ರಾಷ್ಟ್ರೀಯ ಮಟ್ಟದ ಅಂತರ ಕಾಲೇಜು ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ತರಗತಿಗಳಲ್ಲಿ ಕಲಿಯುವು ದಕ್ಕೂ ಹೆಚ್ಚಾಗಿ ಪ್ರಾಯೋಗಿಕವಾಗಿ ಉದ್ಯಮ ಅಧ್ಯಯನದಲ್ಲಿ ಕಲಿಯುವುದು ಹೆಚ್ಚು. ಹಾಗಾಗಿ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಪ್ರಾಯೋಗಿಕ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡು ಉದ್ಯಮ ಭೇಟಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕು.<br /> <br /> ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚುವರಿ ಪ್ರಾಯೋಗಿಕ ಜ್ಞಾನ ಪ್ರಾಪ್ತಿಯಾಗುವುದು ಎಂದು ಹೇಳಿ ದರು.ಈ ನಿಟ್ಟಿನಲ್ಲಿ `ಅನಾಲಿಸ್ಟ್~ ಉತ್ತಮ ಪ್ರಯತ್ನವಾಗಿದ್ದು, ಈ ರೀತಿಯ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವುದು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವ ಮಾತನಾಡಿ, ಪ್ರತಿ ಯೊಬ್ಬ ವ್ಯಕ್ತಿಗೂ ವ್ಯಕ್ತಿತ್ವ ಅಭಿವೃದ್ಧಿಯ ಅಗತ್ಯ ಇದ್ದೇ ಇರುತ್ತದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ಸಂದರ್ಭ ದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ವಿವಿಧ 12 ಸ್ನಾತಕೋತ್ತರ ಕೇಂದ್ರ ಹಾಗೂ 8 ಪದವಿ ಕಾಲೇಜುಗಳು ಭಾಗವಹಿಸಿದ್ದವು. ಕಾರ್ಯ ಕ್ರಮ ಸಂಚಾಲಕರಾದ ದೀಪ ವಸಂತ್, ವಿಭಾಗದ ಅಧ್ಯಕ್ಷ ರಿಚರ್ಡ್ ಗೊನ್ಸಾಲ್ವಸ್ ಮಧ್ಯಾಹ್ನ ನಡೆದ ಸಮಾರೋಪದಲ್ಲಿ ಸೀಕ್ವೆಂಟ್ ಸೈಂಟಿಫಿಕ್ ಸಂಸ್ಥೆ ಉಪ ಪ್ರಧಾನ ವ್ಯವಸ್ಥಾಪಕ ಪಿ.ಕೆ. ವಾಸುದೇವ ಮಾತ ನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಗಳಿಕೆಗೆ ಕಾಲೇಜು- ಉದ್ಯಮ ಸಂಪರ್ಕ ಉತ್ತಮವಾಗಿರಬೇಕಿರುವುದು ಅತ್ಯಗತ್ಯ ಎಂದು ಉದ್ಯಮಿ ಕೇಶವ ಜಿ. ಪ್ರಭು ಹೇಳಿದರು.<br /> <br /> ಸೇಂಟ್ ಅಲೊಷಿಯಸ್ ಕಾಲೇಜಿನ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗ ವತಿಯಿಂದ ಶುಕ್ರವಾರ ಎರಿಕ್ ಮಥಾಯಸ್ ಸಭಾಂಗಣ ದಲ್ಲಿ ಏರ್ಪಡಿಸಿದ್ದ `ಅನಾಲಿಸ್ಟ್~- ಅನಾಲಿ ಟಿಕಲ್ ಕೆಮಿಸ್ಟ್ರಿ ರಾಷ್ಟ್ರೀಯ ಮಟ್ಟದ ಅಂತರ ಕಾಲೇಜು ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ತರಗತಿಗಳಲ್ಲಿ ಕಲಿಯುವು ದಕ್ಕೂ ಹೆಚ್ಚಾಗಿ ಪ್ರಾಯೋಗಿಕವಾಗಿ ಉದ್ಯಮ ಅಧ್ಯಯನದಲ್ಲಿ ಕಲಿಯುವುದು ಹೆಚ್ಚು. ಹಾಗಾಗಿ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಪ್ರಾಯೋಗಿಕ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡು ಉದ್ಯಮ ಭೇಟಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕು.<br /> <br /> ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚುವರಿ ಪ್ರಾಯೋಗಿಕ ಜ್ಞಾನ ಪ್ರಾಪ್ತಿಯಾಗುವುದು ಎಂದು ಹೇಳಿ ದರು.ಈ ನಿಟ್ಟಿನಲ್ಲಿ `ಅನಾಲಿಸ್ಟ್~ ಉತ್ತಮ ಪ್ರಯತ್ನವಾಗಿದ್ದು, ಈ ರೀತಿಯ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವುದು ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವ ಮಾತನಾಡಿ, ಪ್ರತಿ ಯೊಬ್ಬ ವ್ಯಕ್ತಿಗೂ ವ್ಯಕ್ತಿತ್ವ ಅಭಿವೃದ್ಧಿಯ ಅಗತ್ಯ ಇದ್ದೇ ಇರುತ್ತದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ಸಂದರ್ಭ ದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ವಿವಿಧ 12 ಸ್ನಾತಕೋತ್ತರ ಕೇಂದ್ರ ಹಾಗೂ 8 ಪದವಿ ಕಾಲೇಜುಗಳು ಭಾಗವಹಿಸಿದ್ದವು. ಕಾರ್ಯ ಕ್ರಮ ಸಂಚಾಲಕರಾದ ದೀಪ ವಸಂತ್, ವಿಭಾಗದ ಅಧ್ಯಕ್ಷ ರಿಚರ್ಡ್ ಗೊನ್ಸಾಲ್ವಸ್ ಮಧ್ಯಾಹ್ನ ನಡೆದ ಸಮಾರೋಪದಲ್ಲಿ ಸೀಕ್ವೆಂಟ್ ಸೈಂಟಿಫಿಕ್ ಸಂಸ್ಥೆ ಉಪ ಪ್ರಧಾನ ವ್ಯವಸ್ಥಾಪಕ ಪಿ.ಕೆ. ವಾಸುದೇವ ಮಾತ ನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>