ಕುಂದಾಪುರ: ಹಿಂದೆ ವಿರೋಧ ಪಕ್ಷದಲ್ಲಿ ಇದ್ದ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಬೇಕು ಎನ್ನುವ ಏಕೈಕ ಉದ್ದೇಶಕ್ಕಾಗಿ ಯುಪಿಐ ಸರ್ಕಾರದ ಕಾರ್ಯಕ್ರಮಗಳನ್ನು ವಿರೋಧ ಮಾಡು ತ್ತಿದ್ದರು. ಇದೀಗ ಅಧಿಕಾರಕ್ಕೆ ಬಂದ ಬಳಿಕ ಈ ಹಿಂದಿನ ಕಾರ್ಯಕ್ರಗಳನ್ನೆ ಹೆಸರು ಬದಲಾವಣೆ ಮಾಡಿ ನಮ್ಮದು ಎಂದು ಹೆಗಲು ತಟ್ಟಿಕೊಳ್ಳುತ್ತಿದೆ ಎಂದು ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಲೇವಡಿ ಮಾಡಿದ್ದಾರೆ.
ಇಲ್ಲಿಗೆ ಸಮೀಪದ ಹೆಮ್ಮಾಡಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಯುಪಿಐ ಸರ್ಕಾರದ ಉದ್ಯೋಗ ಭರವಸೆ, ಆಧಾರ್ ಕಾರ್ಡ್, ಬಳಕೆ ದಾರರ ಖಾತೆಗೆ ನೆರವಾಗಿ ಗ್ಯಾಸ್ ಸಬ್ಸಿಡಿ ನೀಡಿಕೆ ಸೇರಿದಂತೆ ಹಲವು ಕಾರ್ಯ ಕ್ರಮಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿದ್ದಾರೆ.