2008 ರಲ್ಲಿ ನಡೆದ ಮುಂಬೈ ಉಗ್ರರ ದಾಳಿಯ ನಂತರ ಕರಾವಳಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರತೀಯ ನೌಕಾಪಡೆ, ಕರಾವಳಿ ಕಾವಲು ಪಡೆ, ರಾಜ್ಯ ಪೊಲೀಸ್, ಕರಾವಳಿ ಭದ್ರತಾ ಪೊಲೀಸರು, ಅಬಕಾರಿ ಮತ್ತು ಸುಂಕ ಇಲಾಖೆ, ಮೀನುಗಾರಿಕೆ, ನವ ಮಂಗಳೂರು ಬಂದರು ಪ್ರಾಧಿಕಾರ, ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಭಾಗವಹಿಸಲಿವೆ.