ಮಂಗಳೂರು: ಕದ್ರಿಯಲ್ಲಿರುವ ಹಿಂದೂ ಸ್ಮಶಾನದ ಉದ್ಘಾಟನೆಗೆ ಬಂದಿದ್ದ ಜನಪ್ರತಿನಿಧಿಗಳಿಗೆ ಸ್ಥಳೀಯರು ಅಡ್ಡಿಪಡಿಸಿದರು. ತಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಇರುವುದರಿಂದ ಉದ್ಘಾ ಟನೆಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಸ್ಮಶಾನದ ಸುತ್ತ ಇಂಟರ್ಲಾಕ್ ಅಳವಡಿಸಿರುವುದಕ್ಕೆ ಸ್ಥಳೀಯ ಜೋಗಿ ಸಮಾಜದವರು ಆಕ್ಷೇಪ ವ್ಯಕ್ತಪಡಿಸಿದರು. ಇಂಟರ್ಲಾಕ್ ಅನ್ನು ತೆರವುಗೊಳಿಸಬೇಕು. ಜೋಗಿ ಸಮಾಜದ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಶಾಸಕ ಜೆ.ಆರ್. ಲೋಬೊ, ಮೇಯರ್ ಭಾಸ್ಕರ್ ಮೊಯಿಲಿ, ಸ್ಥಳೀಯರ ಬೇಡಿಕೆಗಳನ್ನು ಆಲಿಸಿದರು. ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಶಾಸಕ ಲೋಬೊ ಭರವಸೆ ನೀಡಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಸಚಿವ ಬಿ. ರಮಾನಾಥ ರೈ, ಅಭಿವೃದ್ಧಿಪಡಿಸಿದ ಸ್ಮಶಾನವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಾಜಿ ಮೇಯರ್ಗಳಾದ ಹರಿನಾಥ, ಮಹಾಬಲ ಮಾರ್ಲ, ಪಾಲಿಕೆ ಸದಸ್ಯ ಡಿ.ಕೆ. ಅಶೋಕ್ ಇದ್ದರು.