ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುವಾರ ಪೂರ್ವ ಶಿಷ್ಠ ಸಂಪ್ರದಾ ಯದಂತೆ ನಾಗರ ಪಂಚಮಿ ಆಚರಿಸಲಾ ಗುವುದು. ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದ ಹೊರಾಂಗಣದಲ್ಲಿರುವ ನಾಗ ಪ್ರತಿಷ್ಠಾ ಮಂಟಪದಲ್ಲಿ ನಾಗರಾಜನಿಗೆ ಹಾಲು ಮತ್ತು ಎಳನೀರಿನ ಅಭಿಷೇಕ ಶ್ರದ್ಧಾ ಭಕ್ತಿಯಿಂದ ನೆರವೇರಲಿದೆ. ಪ್ರತಿ ವರ್ಷ ಭಕ್ತರು ಶ್ರೀ ಕ್ಷೇತ್ರದಲ್ಲಿ ನಾಗರಾ ಜನಿಗೆ ತನು ಎರೆಯುತ್ತಾರೆ. ಅಲ್ಲದೆ ಈ ದಿನ ಶ್ರೀ ದೇವಳದಲ್ಲಿ ವಿಶೇಷ ಪಂಚಾ ಮೃತ ಮಹಾಭಿಷೇಕ ನೆರವೇರಲಿದೆ.