ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡ್ಸೆ ಜಯಂತಿ: ಹಿಂದೂ ಮಹಾಸಭಾ ಮುಖಂಡ ರಾಜೇಶ್‌ ಬಂಧನ

Last Updated 22 ಮೇ 2019, 10:45 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕುಂಪಲ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್‌ ಗೋಡ್ಸೆ ಜನ್ಮದಿನ ಆಚರಣೆ ಮಾಡಿದ್ದ ಪ್ರಕರಣದಲ್ಲಿ ಹಿಂದೂ ಮಹಾಸಭಾ ಮುಖಂಡ ರಾಜೇಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕುಂಪಲ ಆಶ್ರಯ ಕಾಲೋನಿಯ ವಿಶ್ವನಾಥ ಪೂಜಾರಿ ಎಂಬಾತನ ಮನೆಯಲ್ಲಿ ಭಾನುವಾರ ನಾಥೂರಾಮ್‌ ಗೋಡ್ಸೆ ಜಯಂತಿ ಆಚರಿಸಲಾಗಿತ್ತು. ಈ ಸಂಬಂಧ ಹಿಂದೂ ಮಹಾಸಭಾ ಮುಖಂಡರಾದ ರಾಜೇಶ್‌, ಲೋಹಿತ್‌, ವಿಶ್ವನಾಥ ಪೂಜಾರಿ ಸೇರಿದಂತೆ ಐವರ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಖಚಿತ ಮಾಹಿತಿ ಆಧರಿಸಿ ರಾಜೇಶ್‌ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT