<p>ವಿಟ್ಲ: ಅತಿ ಹೆಚ್ಚು ಅಪಘಾತ ಸಂಭವಿಸುವ ಮಾಣಿ-–ಮೈಸೂರು ರಾಜ್ಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಒಳಚರಂಡಿ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದು, ರಸ್ತೆ ಮಧ್ಯದಲ್ಲಿ ಹೊಂಡ ತೋಡಿದ್ದರಿಂದ ದಿನವಿಡೀ ಸಂಚಾರ ಸಮಸ್ಯೆ ಹಾಗೂ ದೂಳಿನ ಸಮಸ್ಯೆಯಿಂದ ವಾಹನ ಚಾಲಕರು, ಶಾಲಾ-–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುತ್ತಿದ್ದಾರೆ.<br /> <br /> ವಾರದ ಹಿಂದೆ ಕೆಆರ್ಡಿಸಿಎಲ್ ವತಿಯಿಂದ ಮಾಣಿ-–ಮೈಸೂರು ರಾಜ್ಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಒಳಚ ರಂಡಿ ನಿರ್ಮಾಣ ಮಾಡುವ ಉದ್ದೇಶ ದಿಂದ ರಸ್ತೆ ಮಧ್ಯದಲ್ಲಿ ಬೃಹದಾಕಾರದ ಹೊಂಡ ತೋಡಿ ಕಾಮಗಾರಿ ಪ್ರಾರಂಭಿಸಲಾಗಿತ್ತು.<br /> <br /> ವಾರ ಕಳೆದರೂ ಇನ್ನೂ ಅರ್ಧ ದಷ್ಟು ಕಾಮಗಾರಿ ಮುಗಿದಿಲ್ಲ. ಇದರಿಂದ ದ್ವಿಮುಖ ಸಂಚಾರಕ್ಕೆ ತೊಂದರೆ ಯಾಗುತ್ತಿದೆ ಎಂದು ಸಾರ್ವಜನಿಕರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.<br /> <br /> ಒಂದು ಬದಿಯ ಕಾಮಗಾರಿ ಮುಗಿದ ಬಳಿಕ ಇನ್ನೊಂದು ಬದಿಯಲ್ಲಿ ಇದೇ ರೀತಿಯ ಹೊಂಡ ತೋಡಿ ಕಾಮಗಾರಿ ನಡೆಸಲಿದ್ದು, ಮತ್ತೊಮ್ಮೆ ಇದೇ ಪರಿಸ್ಥಿತಿ ಮುಂದುವರೆಯಲಿದೆ., ಅಲ್ಲಿಯೂ ಆಮೆಗತಿಯಲ್ಲಿ ಕಾಮಗಾರಿ ಮುಂದುವರಿದರೆ ವರ್ಷವಿಡೀ ಇಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಹೋಗಲು ಹಾಗೂ ಬರಲು ಚಿಕ್ಕದಾದ ಸ್ಥಳವನ್ನು ಬಿಡಲಾಗಿದೆ. ಈ ಸ್ಥಳದಲ್ಲಿ ಆಟೊ ರಿಕ್ಷಾ ಕೂಡಾ ಸರಿಯಾಗಿ ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ಇದೆ. ಶಿರಾಡಿ ಘಾಟಿ ಬಂದ್ ಆದ ಹಿನ್ನೆಲೆಯಲ್ಲಿ ಮಂಗಳೂರು-–ಬೆಂಗಳೂ ರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೆಂಗಳೂರು ಕಡೆ ತೆರಳುವ ವಾಹನಗಳು ಇದೇ ರಾಜ್ಯ ಹೆದ್ದಾರಿಯಲ್ಲಿ ತೆರಳುತ್ತಿದ್ದು, ಬೆಳಗ್ಗಿನಿಂದ ರಾತ್ರಿ ವರೆಗೂ ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು.<br /> <br /> ಮಾಣಿ ಗ್ರಾಮ ಪಂಚಾಯಿತಿ ವತಿಯಿಂದ ಬಸ್ ತಂಗುದಾಣ ನಿರ್ಮಿಸ ಲು ಕಲ್ಲುಗಳನ್ನು ತಂದು ಹಾಕಲಾಗಿದ್ದು, ಈ ಚರಂಡಿ ಕಾಮಗಾರಿಯಿಂದ ಅದರ ಕೆಲಸ ಅರ್ಧಕ್ಕೆ ನಿಂತಿದೆ. ಮಾಣಿ ಪರಿಸರದಲ್ಲಿ ಹಲವು ಶಾಲಾ-–ಕಾಲೇಜ್ ಗಳಿದ್ದು, ಶಾಲೆ ಬಿಡುವ ವೇಳೆ ಸಂಚಾರ ದಟ್ಟಣೆ ಜಾಸ್ತಿ ಇರುತ್ತದೆ. ಅದಲ್ಲದೇ ಇಲ್ಲಿಯ ದೂಳಿನಿಂದ ಜನರು ರೋಸಿ ಹೋಗಿದ್ದಾರೆ.<br /> <br /> ಕಾಮಗಾರಿಯ ಹೊಣೆ ಹೊತ್ತವರು ತಮಗೆ ಇಷ್ಟಬಂದಂತೆ ಕೆಲಸ ನಿರ್ವಹಿಸು ತ್ತಿದ್ದು, ಇದರಿಂದ ಸದ್ಯಕ್ಕೆ ಈ ಕಾಮಗಾರಿ ಮುಗಿವಂತೆ ಕಾಣುತ್ತಿಲ್ಲ. ಭಾನುವಾರ ಕಾಮಗಾರಿಗೂ ರಜೆ. ಸೋಮ ವಾರ ಕೂಡಾ ಕೆಲಸ ಪ್ರಾರಂಭಿಸಿಲ್ಲ. ಮಂಗಳವಾರ ಸಂಬಂಧ ಪಟ್ಟವರಿಗೆ ಸಾರ್ವಜನಿಕರು ತಿಳಿಸಿದಾಗ ಮಧ್ಯಾಹ್ನ ವೇಳೆ ಕೆಲಸಗಾರರು ಬಂದಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.<br /> <br /> ಮಾಣಿ ಜಂಕ್ಷನ್ಗೆ ಅಪಘಾತ ವಲಯ ಎಂಬ ಹೆಸರಿದ್ದು, ಇದು ಈ ಹಿಂದೆ ಹಲವು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇದೀಗ ಅದೇ ಜಂಕ್ಷ ನ್ನಲ್ಲಿ ಹೊಂಡ ತೋಡಿ ಕಾಮಗಾರಿ ನಡೆಸುತ್ತಿರುವುದರಿಂದ ಇಕ್ಕಟ್ಟಿನ ರಸ್ತೆ ಯಲ್ಲಿ ವಾಹನಗಳು ಸಂಚರಿಸಲು ಹರಸಾಹಸ ಪಡುತ್ತಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ ಮಾಡುತ್ತಿದೆ.<br /> <br /> ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಸಂಬಂಧಪಟ್ಟವರು ಚುರುಕು ಮುಟ್ಟಿಸಿ ಬೇಗನೇ ಕಾಮಗಾರಿ ಮುಗಿಸದಿದ್ದಲ್ಲಿ ಇದರ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸು ವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಟ್ಲ: ಅತಿ ಹೆಚ್ಚು ಅಪಘಾತ ಸಂಭವಿಸುವ ಮಾಣಿ-–ಮೈಸೂರು ರಾಜ್ಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಒಳಚರಂಡಿ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದು, ರಸ್ತೆ ಮಧ್ಯದಲ್ಲಿ ಹೊಂಡ ತೋಡಿದ್ದರಿಂದ ದಿನವಿಡೀ ಸಂಚಾರ ಸಮಸ್ಯೆ ಹಾಗೂ ದೂಳಿನ ಸಮಸ್ಯೆಯಿಂದ ವಾಹನ ಚಾಲಕರು, ಶಾಲಾ-–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುತ್ತಿದ್ದಾರೆ.<br /> <br /> ವಾರದ ಹಿಂದೆ ಕೆಆರ್ಡಿಸಿಎಲ್ ವತಿಯಿಂದ ಮಾಣಿ-–ಮೈಸೂರು ರಾಜ್ಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಒಳಚ ರಂಡಿ ನಿರ್ಮಾಣ ಮಾಡುವ ಉದ್ದೇಶ ದಿಂದ ರಸ್ತೆ ಮಧ್ಯದಲ್ಲಿ ಬೃಹದಾಕಾರದ ಹೊಂಡ ತೋಡಿ ಕಾಮಗಾರಿ ಪ್ರಾರಂಭಿಸಲಾಗಿತ್ತು.<br /> <br /> ವಾರ ಕಳೆದರೂ ಇನ್ನೂ ಅರ್ಧ ದಷ್ಟು ಕಾಮಗಾರಿ ಮುಗಿದಿಲ್ಲ. ಇದರಿಂದ ದ್ವಿಮುಖ ಸಂಚಾರಕ್ಕೆ ತೊಂದರೆ ಯಾಗುತ್ತಿದೆ ಎಂದು ಸಾರ್ವಜನಿಕರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.<br /> <br /> ಒಂದು ಬದಿಯ ಕಾಮಗಾರಿ ಮುಗಿದ ಬಳಿಕ ಇನ್ನೊಂದು ಬದಿಯಲ್ಲಿ ಇದೇ ರೀತಿಯ ಹೊಂಡ ತೋಡಿ ಕಾಮಗಾರಿ ನಡೆಸಲಿದ್ದು, ಮತ್ತೊಮ್ಮೆ ಇದೇ ಪರಿಸ್ಥಿತಿ ಮುಂದುವರೆಯಲಿದೆ., ಅಲ್ಲಿಯೂ ಆಮೆಗತಿಯಲ್ಲಿ ಕಾಮಗಾರಿ ಮುಂದುವರಿದರೆ ವರ್ಷವಿಡೀ ಇಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಹೋಗಲು ಹಾಗೂ ಬರಲು ಚಿಕ್ಕದಾದ ಸ್ಥಳವನ್ನು ಬಿಡಲಾಗಿದೆ. ಈ ಸ್ಥಳದಲ್ಲಿ ಆಟೊ ರಿಕ್ಷಾ ಕೂಡಾ ಸರಿಯಾಗಿ ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ಇದೆ. ಶಿರಾಡಿ ಘಾಟಿ ಬಂದ್ ಆದ ಹಿನ್ನೆಲೆಯಲ್ಲಿ ಮಂಗಳೂರು-–ಬೆಂಗಳೂ ರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೆಂಗಳೂರು ಕಡೆ ತೆರಳುವ ವಾಹನಗಳು ಇದೇ ರಾಜ್ಯ ಹೆದ್ದಾರಿಯಲ್ಲಿ ತೆರಳುತ್ತಿದ್ದು, ಬೆಳಗ್ಗಿನಿಂದ ರಾತ್ರಿ ವರೆಗೂ ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು.<br /> <br /> ಮಾಣಿ ಗ್ರಾಮ ಪಂಚಾಯಿತಿ ವತಿಯಿಂದ ಬಸ್ ತಂಗುದಾಣ ನಿರ್ಮಿಸ ಲು ಕಲ್ಲುಗಳನ್ನು ತಂದು ಹಾಕಲಾಗಿದ್ದು, ಈ ಚರಂಡಿ ಕಾಮಗಾರಿಯಿಂದ ಅದರ ಕೆಲಸ ಅರ್ಧಕ್ಕೆ ನಿಂತಿದೆ. ಮಾಣಿ ಪರಿಸರದಲ್ಲಿ ಹಲವು ಶಾಲಾ-–ಕಾಲೇಜ್ ಗಳಿದ್ದು, ಶಾಲೆ ಬಿಡುವ ವೇಳೆ ಸಂಚಾರ ದಟ್ಟಣೆ ಜಾಸ್ತಿ ಇರುತ್ತದೆ. ಅದಲ್ಲದೇ ಇಲ್ಲಿಯ ದೂಳಿನಿಂದ ಜನರು ರೋಸಿ ಹೋಗಿದ್ದಾರೆ.<br /> <br /> ಕಾಮಗಾರಿಯ ಹೊಣೆ ಹೊತ್ತವರು ತಮಗೆ ಇಷ್ಟಬಂದಂತೆ ಕೆಲಸ ನಿರ್ವಹಿಸು ತ್ತಿದ್ದು, ಇದರಿಂದ ಸದ್ಯಕ್ಕೆ ಈ ಕಾಮಗಾರಿ ಮುಗಿವಂತೆ ಕಾಣುತ್ತಿಲ್ಲ. ಭಾನುವಾರ ಕಾಮಗಾರಿಗೂ ರಜೆ. ಸೋಮ ವಾರ ಕೂಡಾ ಕೆಲಸ ಪ್ರಾರಂಭಿಸಿಲ್ಲ. ಮಂಗಳವಾರ ಸಂಬಂಧ ಪಟ್ಟವರಿಗೆ ಸಾರ್ವಜನಿಕರು ತಿಳಿಸಿದಾಗ ಮಧ್ಯಾಹ್ನ ವೇಳೆ ಕೆಲಸಗಾರರು ಬಂದಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.<br /> <br /> ಮಾಣಿ ಜಂಕ್ಷನ್ಗೆ ಅಪಘಾತ ವಲಯ ಎಂಬ ಹೆಸರಿದ್ದು, ಇದು ಈ ಹಿಂದೆ ಹಲವು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇದೀಗ ಅದೇ ಜಂಕ್ಷ ನ್ನಲ್ಲಿ ಹೊಂಡ ತೋಡಿ ಕಾಮಗಾರಿ ನಡೆಸುತ್ತಿರುವುದರಿಂದ ಇಕ್ಕಟ್ಟಿನ ರಸ್ತೆ ಯಲ್ಲಿ ವಾಹನಗಳು ಸಂಚರಿಸಲು ಹರಸಾಹಸ ಪಡುತ್ತಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ ಮಾಡುತ್ತಿದೆ.<br /> <br /> ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಸಂಬಂಧಪಟ್ಟವರು ಚುರುಕು ಮುಟ್ಟಿಸಿ ಬೇಗನೇ ಕಾಮಗಾರಿ ಮುಗಿಸದಿದ್ದಲ್ಲಿ ಇದರ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸು ವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>