ಪುತ್ತೂರು ತಾಲ್ಲೂಕಿನ ಈಶ್ವರಮಂಗಲ ನಿವಾಸಿ, ರಿಕ್ಷಾ ಚಾಲಕ ಹನೀಫ್(37) ಬಂಧಿತ ಆರೋಪಿ. ಈತ ಪಡುಮಲೆ ಔಷಧಿ ವನದಲ್ಲಿರುವ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿಯ ಮೂರ್ತಿಯ ಪಕ್ಕದಲ್ಲಿ ಕುಳಿತು ಮೂರ್ತಿಯ ಎದೆಯನ್ನು ಮುಟ್ಟುವಂತಹ ಅಶ್ಲೀಲ ಭಂಗಿಯ ಭಾವಚಿತ್ರ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದ.